Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದಟ್ಟ ಮಂಜಿನ ಕಾಟ: ನಾಡಿಯಾದಲ್ಲಿ ಮೋದಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವಿಫಲ; ವರ್ಚುವಲ್ ಮೂಲಕ ದೀದಿ ಸರ್ಕಾರಕ್ಕೆ ವಾಗ್ದಾಳಿ!

Spread the love

ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು ವರ್ಚುಯಲ್‌ ಆಗಿ ಪಶ್ಚಿಮ ಬಂಗಾಳದ (West Bengal) ನಾಡಿಯಾದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಮೋದಿಯವರು ದೆಹಲಿಯಿಂದ (Delhi) ಕೋಲ್ಕತ್ತಾಕ್ಕೆ ಆಗಮಿಸಿ ಅಲ್ಲಿಂದ ಹೆಲಿಕಾಪ್ಟರ್‌ (Helicopter) ಮೂಲಕ ತಾಹೆರ್‌ಪುರ ಹೆಲಿಪ್ಯಾಡ್‌ನಲ್ಲಿ ಮಧ್ಯಾಹ್ನ ಇಳಿಯಬೇಕಿತ್ತು. ಆದರೆ ದಟ್ಟವಾದ ಮಂಜಿನಿಂದಾಗಿ ಹೆಲಿಕಾಪ್ಟರ್‌ ಲ್ಯಾಂಡ್‌ ಆಗಲು ಸಾಧ್ಯವಾಗದೇ ಕೋಲ್ಕತ್ತಾಕ್ಕೆ ಮರಳಿತು.

ಹೆಲಿಕಾಪ್ಟರ್‌ ಲ್ಯಾಂಡ್‌ ಆಗುವ ಮುನ್ನ ಅಗಸದಲ್ಲಿ ಹಲವು ಸುತ್ತು ಹಾಕಿತು. ಕೊನೆಗೆ ಲ್ಯಾಂಡ್‌ ಮಾಡುವುದು ಅಸಾಧ್ಯ ಎನ್ನುವುದು ಪೈಲಟ್‌ಗೆ ತಿಳಿಯುತ್ತಿದ್ದಂತೆ ಕೋಲ್ಕತ್ತಾ ಕಡೆಗೆ ಹೆಲಿಕಾಪ್ಟರ್‌ ತಿರುಗಿತು.

ವರ್ಚುಯಲ್‌ ಭಾಷಣದ ಆರಂಭದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಲು ಸಾಧ್ಯವಾಗದ್ದಕ್ಕೆ ಕ್ಷಮೆಯಾಚಿಸಿದರು.

ಮಮತಾ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ತೃಣಮೂಲ ಪಕ್ಷವು ನುಸುಳುಕೋರರನ್ನು ಬೆಂಬಲಿಸುತ್ತದೆ ಮತ್ತು ಅದಕ್ಕಾಗಿಯೇ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅನ್ನು ವಿರೋಧಿಸುತ್ತಿದ್ದಾರೆ. ರಾಜ್ಯದಲ್ಲಿ ಡಬಲ್-ಎಂಜಿನ್ ಸರ್ಕಾರಕ್ಕೆ ಅವಕಾಶ ನೀಡುವಂತೆ ಅವರು ಮನವಿ ಮಾಡಿರು.

ತೃಣಮೂಲ ಕಾಂಗ್ರೆಸ್ ನನ್ನನ್ನು ಮತ್ತು ಬಿಜೆಪಿಯನ್ನು ಎಷ್ಟು ಬೇಕಾದರೂ ವಿರೋಧಿಸಲಿ, ಆದರೆ ಬಂಗಾಳದ ಪ್ರಗತಿಯನ್ನು ನಿಲ್ಲಿಸಬಾರದು. ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಓಲೈಕೆಯಿಂದಾಗಿ ರಾಜ್ಯದಲ್ಲಿ ಆಡಳಿತ ಕುಸಿದಿದೆ ಎಂದು ವಾಗ್ದಾಳಿ ನಡೆಸಿದರು.


Spread the love
Share:

administrator

Leave a Reply

Your email address will not be published. Required fields are marked *