ಚಿಕಿತ್ಸೆ ನೀಡುವ ಬದಲು ರೋಗಿಗೆ ಅವಮಾನಿಸಿ ಹಲ್ಲೆ ನಡೆಸಿದ ಘಟನೆ.

ಶಿಮ್ಲಾ: ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯರೊಬ್ಬರು ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಹಿಮಾಚಲ ಪ್ರದೇಶದ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜಿನಲ್ಲಿ ಭಾನುವಾರ ವೈದ್ಯರೊಬ್ಬರು ರೋಗಿಯ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಶಿಮ್ಲಾ ಜಿಲ್ಲೆಯ ಕುಪ್ವಿ ಉಪವಿಭಾಗಕ್ಕೆ ಉಸಿರಾಟದ ತೊಂದರೆ ಎಂದು ಬಂದಿದ್ದ ತನ್ನ ಬಗ್ಗೆ ವೈದ್ಯರು ಕೆಟ್ಟದಾಗಿ ವರ್ತಿಸಿದ್ದಾರೆ, ಅವಮಾನ ಮಾಡಿದ್ದಾರೆ ಎಂದು ರೋಗಿ ಆರೋಪಿಸಿದ್ದಾರೆ. ಗೌರವದಿಂದ ಮಾತನಾಡಲು ಕೇಳಿದಾಗ ಅವನು ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹೇಳಿದ್ದಾರೆ.
