ಹಿರಿಯೂರು ಬಸ್ ದುರಂತ: ಪ್ರಧಾನಿಯಿಂದ ಪರಿಹಾರ ಘೋಷಣೆ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 11 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಮೃತರ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 11 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅವಘಡ ಸಂಭವಿಸಿದ ಸ್ಥಳಕ್ಕೆ ಆ್ಯಂಬುಲೆನ್ಸ್ ತಲುಪುವುದಕ್ಕೂ ಕಷ್ಟವಾಗಿದೆ. ಸುಮಾರು ನಾಲ್ಕು ಕಿಲೋ ಮೀಟರ್ ನಷ್ಟು ಟ್ರಾಫಿಕ್ ಜಾಮ್ ಆಗಿದ್ದು, ಸ್ಥಳಕ್ಕೆ ಆಂಬುಲೆನ್ಸ್ ಗಳು ದೌಡಾಯಿಸುತ್ತಿವೆ.
ಇನ್ನು ಭೀಕರ ಅಪಘಾತದಲ್ಲಿ ಬಸ್ ನಲ್ಲಿ 15 ಮಹಿಳೆಯರು, 14 ಪುರುಷರು ಪ್ರಯಾಣಿಸುತ್ತಿದ್ದ ಮಾಹಿತಿ ಲಭ್ಯವಾಗಿದೆ. ಮಂಜುನಾಥ್, ಸಂಧ್ಯಾ, ಶಶಾಂಕ್, ದಿಲೀಪ್, ಪ್ರೀತಿಶ್ವರನ್, ವಿ.ಬಿಂದು, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ, ಸೂರಜ್, ಮಾನಸ, ಮಿಲನಾ, ಹೇಮರಾಜ್ ಕುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್, ಹೆಚ್.ಕಿರಣ್ ಪಾಲ್, ಎಂ.ಕೀರ್ತನ್.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 11 ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಬಸ್ ಅತಿವೇಗದಿಂದ ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡದ ರಭಸಕ್ಕೆ ನೋಡ ನೋಡುತ್ತಿದ್ದಂತೆ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕನ್ನಾಲಿಗೆಗೆ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗೋ ಸಾಧ್ಯತೆ ಇದೆ ಎನ್ನಲಾಗಿದೆ.
ವೇಗವಾಗಿ ಬರುತ್ತಿದ್ದ ಬಸ್ ಬೃಹತ್ ಕಂಟೈನರ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಗೆ ಬೆಂಕಿ ಹತ್ತಿಕೊಂಡಿದೆ. ಒಂದಷ್ಟು ಪ್ರಯಾಣಿಕರು ಬಸ್ನಿಂದ ಇಳಿದರೂ ಕೂಡಾ 17ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ.