ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಶಿಕ್ಷಕ ಸಾ*ವು!

ಶಿಕಾರಿಪುರ: ಮನೆ ಮಹಡಿ ಮೇಲೆ ನಿಂತು ಮನೆ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ತಲೆಗೆ ತೀವ್ರ ಪಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಶಿಕ್ಷಕ ಮೃತಪಟ್ಟ ಘಟನೆ ತಾಲೂಕಿನ ಹೊಸದೂಪದಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.


ತಾಲೂಕಿನ ನಂದಿಹಳ್ಳಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಯಶೋಧರ (54) ಮೃತಪಟ್ಟವರು.

ಅವರು ಮೂಲತಃ ಹೊನ್ನಾಳಿ ತಾಲೂಕಿನ ಜೀನಳ್ಳಿ ಗ್ರಾಮದ ನಿವಾಸಿಯಾಗಿದ್ದು, ಶಿಕಾರಿಪುರ ಪಟ್ಟಣ ಸಮೀಪವಿರುವ ಹೊಸದೂಪದಹಳ್ಳಿ ಗ್ರಾಮದಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದರು. ಮೃತರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.