Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಗಳ ಡಿಜಿಟಲ್ ಕೃ*ತ್ಯಕ್ಕೆ ತಾಯಿ ಕಂಗಾಲು: ಸೈಬರ್ ಕ್ರೈಂ ಮೆಟ್ಟಿಲೇರಿದ ಬೆಂಗಳೂರಿನ ಕೌಟುಂಬಿಕ ಕಲಹ!

Spread the love

ಬೆಂಗಳೂರು: ವಿದ್ಯಾಭ್ಯಾಸಕ್ಕಾಗಿ ತಂದೆ-ತಾಯಿಯವರು ಕೊಟ್ಟ ಮೊಬೈಲ್ ಅನ್ನು ದುರುಪಯೋಗಪಡಿಸಿಕೊಂಡು ಕುಟುಂಬ ಸದಸ್ಯರ ಖಾಸಗಿ ಫೋಟೋಗಳನ್ನು ತೆಗೆದು ಪ್ರಿಯಕರನಿಗೆ ಕಳುಹಿಸಿದ್ದ ಆರೋಪದ ಮೇರೆಗೆ ಯುವತಿಯೊಬ್ಬಳು ಹಾಗೂ ಆಕೆಯ ಪ್ರಿಯಕರನ ವಿರುದ್ಧ ಬೆಂಗಳೂರಿನ (Bangalore) ಬೈಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಬೆಂಗಳೂರಿನ ಬ್ಯಾಟರಾಯನಪುರ ವ್ಯಾಪ್ತಿಯ ನಿವಾಸಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿದ್ಯಾಭ್ಯಾಸಕ್ಕಾಗಿ ಮೊಬೈಲ್ ಬೇಕೆಂದು ಯುವತಿ ಕೇಳಿದ್ದ ಕಾರಣ ಪೋಷಕರು ಮೊಬೈಲ್ ತೆಗೆದು ಕೊಟ್ಟಿದ್ದರು. ಕೆಲವು ದಿನಗಳ ಹಿಂದೆ ಆಕೆ ಅಪರಿಚಿತ ಯುವಕನೊಂದಿಗೆ ಮಾತನಾಡುತ್ತಿದ್ದ ವಿಚಾರ ಕುಟುಂಬದ ಗಮನಕ್ಕೆ ಬಂದಿತ್ತು. ಈ ವಿಚಾರವನ್ನು ಆಕೆಯ ತಾಯಿ ಪತಿಗೆ ತಿಳಿಸಿದ್ದರು. ಅದಾದ ನಂತರ ಅನುಮಾನ ಬಂದು ಮೊಬೈಲ್ ಪರಿಶೀಲನೆ ನಡೆಸಿದಾಗ ಕುಟುಂಬ ಸದಸ್ಯರ ಖಾಸಗಿ ಅಂಗಾಗಗಳ ಫೋಟೋಗಳನ್ನು ರಹಸ್ಯವಾಗಿ ತೆಗೆದು ಪ್ರಿಯಕರನಿಗೆ ಕಳುಹಿಸಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾಯಿ ಮಲಗಿದ್ದ ವೇಳೆ ಖಾಸಗಿ ಅಂಗದ ಫೋಟೊ ತೆಗೆದಿದ್ದ ಯುವತಿ

ಆರೋಪಿ ಯುವತಿಯು ತಾಯಿ ಮಲಗಿದ್ದ ವೇಳೆ ಅವರ ಖಾಸಗಿ ಅಂಗಾಂಗಗಳ ಫೋಟೋಗಳನ್ನು ತೆಗೆದು ಕಳುಹಿಸಿದ್ದಳು ಎಂಬುದು ಮೊಬೈಲ್ ಪರಿಶೀಲಿಸಿದಾಗ ಗೊತ್ತಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಅಷ್ಟೇ ಅಲ್ಲದೆ, ಯುವತಿಯು ತನ್ನ ದೊಡ್ಡಮ್ಮ ಸ್ನಾನ ಮಾಡುತ್ತಿದ್ದಾಗ ಅವರಿಗೆ ಗೊತ್ತಾಗದಂತೆ ನಗ್ನ ಫೋಟೊ ತೆಗೆದಿದ್ದಾಳೆ. ಅದನ್ನು ಕೂಡ ಪ್ರಿಯಕರನಿಗೆ ಕಳುಹಿಸಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಿಷಯ ತಿಳಿದು ಮಗಳಿಗೆ ಬುದ್ಧಿ ಹೇಳಿ ಫೋಟೋಗಳನ್ನು ಅಳಿಸಿಹಾಕಿದ್ದೇವೆ ಎಂದು ತಾಯಿ ಹೇಳಿದ್ದಾರೆ. ಅಲ್ಲದೆ, ಭವಿಷ್ಯದಲ್ಲಿ ಆ ಫೋಟೊಗಳು ದುರುಪಯೋಗವಾಗುವ ಭಯದಿಂದ ಪೊಲೀಸ್ ಠಾಣೆಗೆ ದೂರು ನೀಡಿದ್ದಾಗಿ ತಿಳಿಸಿದ್ದಾರೆ.

ಸದ್ಯ, ಯುವತಿ ಹಾಗೂ ಆಕೆಯ ಪ್ರಿಯಕರ ವರುಣ್ ಅಲಿಯಾಸ್ ಗಿರಿಧರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ, ಕಾಲೇಜಿಗೆ ಹೋಗುವ ಮಗಳು ಓದುವುದಕ್ಕೆ ಅಗತ್ಯ ಎಂದು ಕೇಳಿದ್ದರಿಂದ ಮೊಬೈಲ್ ತೆಗೆದುಕೊಟ್ಟ ಪೋಷಕರು ಅದರಿಂದಲೇ ಇಕ್ಕಟ್ಟಿಗೆ ಸಿಲುಕುವಂತಾಗಿದೆ.


Spread the love
Share:

administrator

Leave a Reply

Your email address will not be published. Required fields are marked *