Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರತ್ನಗಿರಿಯಲ್ಲಿ ಭೀಕರ ಅಪಘಾತ; ಮಂಗಳೂರು ಮೂಲದ ಲಾರಿ ಚಾಲಕ ಮೃತ್ಯು

Spread the love

ಕೊಣಾಜೆ: ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸಂಭವಿಸಿದ ಅಪಘಾತವೊಂದರಲ್ಲಿ ಮುಡಿಪು ಸಮೀಪದ ಬೋಳಿಯಾ‌ರ್ ನಿವಾಸಿ ವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಬೋಳಿಯಾ‌ರ್ ನಿವಾಸಿ ಬಿಎಚ್ ಕರೀಂ ಎಂಬವರ ಪುತ್ರ ಮುಹಮ್ಮದ್ ರಿಝಾನ್ (28) ಮೃತರು ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಕಂಪೆನಿಯೊಂದರ ಮೂಲಕ ಮೀನಿನ ಲಾರಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ರಿಝಾನ್ ಅವರು ಮಹಾರಾಷ್ಟ್ರಕ್ಕೆ ಮೀನಿನ ಲಾರಿ ಚಲಾಯಿಸುತ್ತಿದ್ದು, ಮಹಾರಾಷ್ಟ್ರದ ರತ್ನಗಿರಿ ಎಂಬಲ್ಲಿ ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಝಾನ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ತಂದೆ, ತಾಯಿ, ಪತ್ನಿ, ಎರಡು ವರ್ಷದ ಮಗು ಹಾಗೂ ಮೂವರು ಸಹೋದರು, ಮೂವರು ಸಹೋದರಿ ಯರನ್ನು ಅಗಲಿದ್ದಾರೆ.
ಮೃತದೇಹವು ಬುಧವಾರ ಬೆಳಿಗ್ಗೆ ಊರಿಗೆ ತಲುಪಲಿದ್ದು ಬೋಳಿಯಾರ್ ಕೇಂದ್ರ ಮಸೀದಿಯ ವಠಾರದಲ್ಲಿ ದಫನ ಮಾಡುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.


Spread the love
Share:

administrator

Leave a Reply

Your email address will not be published. Required fields are marked *