37 ಲಕ್ಷಕ್ಕೂ ಅಧಿಕ ಮಂದಿಗೆ ತಲಾ ₹2,000 ವಿಶೇಷ ಧನಸಹಾಯ; ಸಿಎಂ ಸ್ಟಾಲಿನ್ ಘೋಷಣೆ

ಚೆನ್ನೈ: ಸಮಾಜದ ದುರ್ಬಲ ವರ್ಗದ 37.79 ಲಕ್ಷ ಜನರ ಬ್ಯಾಂಕ್ ಖಾತೆಗಳಿಗೆ ತಲಾ 2,000ರೂ. ಜಮೆ ಮಾಡಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಹೇಳಿದ್ದಾರೆ.
ವೃದ್ಧರು, ವಿಧವೆಯರು, ಲಿಂಗತ್ವ ಅಲ್ಪ ಸಂಖ್ಯಾತರು ಮತ್ತು ಅಂಗವಿಕಲರಿಗೆ ಹೆಚ್ಚುವರಿ ಬೆಂಬಲ ನೀಡುವಂತೆ ಕೋರಿದ ಮನವಿಗೆ ಪ್ರತಿಕ್ರಿಯಿಸಿದ ಸರಕಾರ, ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಅಸ್ತಿತ್ವದಲ್ಲಿರುವ ಮಾಸಿಕ ಪಿಂಚಣಿಗಿಂತ 2,000 ರೂ. ವಿಶೇಷ ನೆರವು ನೀಡಿದೆ. ಸಮಾಜದಲ್ಲಿರುವ ದುರ್ಬಲ ವರ್ಗದ ಜನರ ಆರ್ಥಿಕ ಸಂಕಷ್ಟಗಳನ್ನು ನಿವಾರಿಸುವ ಗುರಿಯನ್ನು ಈ ಕ್ರಮ ಹೊಂದಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.
ಈ ಕ್ರಮವು ಬಡವರ, ಸಮಾಜನದ ದುರ್ಬಲ ವರ್ಗದ ಜನರ ಆರ್ಥಿಕ ಸಂಕಷ್ಟಗಳನ್ನು ನಿವಾರಿಸುವ ಗುರಿಯನ್ನು ಹೊಂದಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.
