Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶಾಸಕರ ವಿರುದ್ಧ ಹನಿಟ್ರ್ಯಾಪ್ ಷಡ್ಯಂತ್ರ: ರಾಜಕೀಯದಲ್ಲಿ ಸಂಚಲನ

Spread the love

ಬೆಂಗಳೂರು: ರಾಜ್ಯ ರಾಜಕಾರಣವೇ ಬೆಚ್ಚಿ ಬೀಳಿಸುವ ಸುದ್ದಿಯೊಂದು ಕೇಳಿ ಬಂದಿದ್ದು, ರಾಜ್ಯದ ಪ್ರಭಾವಿ ಸಚಿವರೊಬ್ಬರನ್ನು ಮಟ್ಟಹಾಕಲು ಮತ್ತೊಬ್ಬ ಪ್ರಭಾವಿ ನಾಯಕ ‘ಹನಿಟ್ರ್ಯಾಪ್’ ಬಲೆ ಬೀಸಿರುವ ಗಂಭೀರ ಆರೋಪ ಕೇಳಿ ಬಂದಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಮೂಲಕ ಖೆಡ್ಡಾಗೆ ಬೀಳಿಸುವ ಮೂಲಕ ಅವರ ಚಾರಿತ್ರ್ಯ ವಧೆ ಮಾಡಿ ಆ ಮೂಲಕ ರಾಜಕೀಯವಾಗಿ ಮುಗಿಸುವ ತಂತ್ರವನ್ನು ಮತ್ತೊಬ್ಬ ಪ್ರಭಾವಿ ನಾಯಕ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಿಎಂ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ತುಮಕೂರು ಭಾಗದ ಪ್ರಭಾವಿ ಸಚಿವರನ್ನು ಹನಿಟ್ರ್ಯಾಪ್‌ಗೆ ಬೀಳಿಸಲು ಯತ್ನ ನಡೆಸಿದ್ದು, ಮತ್ತೊಬ್ಬ ಪ್ರಭಾವಿ ನಾಯಕನ ಟೀಂನಿಂದ ಸತತವಾಗಿ ಹನಿಟ್ರ್ಯಾಪ್‌ಗೆ ಬೀಳಿಸಲು ಪ್ರಯತ್ನ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಆದರೆ ಹನಿಟ್ರ್ಯಾಪ್ ಬಗ್ಗೆ ಅನುಮಾನ ಬಂದ ಸಚಿವ ಹನಿಟ್ರ್ಯಾಪ್ ಟೀಮ್‌ನ ಬಣ್ಣ ಬಯಲು ಮಾಡಿ ವಾರ್ನಿಂಗ್ ಕೊಟ್ಟು ಕಳುಹಿಸಿದ್ದಾರಂತೆ ಎಂದು ಮೂಲಗಳು ತಿಳಿಸಿವೆ. ಹನಿಟ್ರ್ಯಾಪ್ ಷಡ್ಯಂತ್ರ ಮಾಡಿದ್ದು ಯಾರು? ತುಮಕೂರು ಭಾಗದ ಪ್ರಭಾವಿ ಸಚಿವರಿಗೆ ಹನಿಟ್ರ್ಯಾಪ್ ಬಲೆ ಬೀಸಿದ ಷಡ್ಯಂತ್ರದ ಹಿಂದೆ ಮತ್ತೊಬ್ಬ ಪ್ರಭಾವಿ ನಾಯಕನ ಕೈವಾಡ ಇದೆ ಎಂದು ಹೇಳಲಾಗಿದ್ದು, ಆ ಸಚಿವರನ್ನು ಖೆಡ್ಡಾಗೆ ಕೆಡವಿ ರಾಜಕೀಯವಾಗಿ ಮುಗಿಸಿದರೆ ತಮಗೆ ಪದೇ ಪದೇ ಸವಾಲಾಗಿ ಎದುರು ನಿಲ್ಲುತ್ತಿದ್ದ ಒಂದು ದಾರಿಯನ್ನು ಸುಗಮಗೊಳಿಸಿದಂತಾಗುತ್ತೆ ಅನ್ನೋ ಲೆಕ್ಕಾಚಾರದಲ್ಲಿ ಆ ಪ್ರಭಾವಿ ಸಚಿವ ತುಮಕೂರು ಭಾಗದ ಸಚಿವರ ಮೇಲೆ ಹನಿಟ್ರ್ಯಾಪ್ ಷಡ್ಯಂತ್ರ ಮಾಡಿದ್ದರು ಎಂದು ಹೇಳಲಾಗ್ತಿದೆ. ಸದ್ಯ ಈ ಷಡ್ಯಂತ್ರವನ್ನು ಗಂಭೀರವಾಗಿ ಪರಿಗಣಿಸಿರುವ ತುಮಕೂರು ಮೂಲದ ಪ್ರಭಾವಿ ಸಚಿವ, ರಾಜಕೀಯ ಜೀವನದಲ್ಲಿ ಎಲ್ಲೂ ಎಡವದಂತೆ ಗಂಭೀರ ಹೆಜ್ಜೆಯನ್ನು ಇಟ್ಟು ಎದುರಾಳಿಗಳ ವಿರುದ್ಧ ತೊಡೆ ತಟ್ಟಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *