Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ತುಮಕೂರು: ಮಂಗನ ಚೇಷ್ಟೆಗೆ ಬಲಿಯಾದ ಕಾರ್ ಶೋರೂಂ ಸುಪರ್ ವೈಸರ್; ಜೇನುನೊಣಗಳ ದಾಳಿಗೆ ವ್ಯಕ್ತಿ ಸಾ*ವು

Spread the love

ತುಮಕೂರು/ ರಾಯಚೂರು: ಕೋತಿಯೊಂದು ಮಾಡಿದ ಕಿತಾಪತಿಗೆ ಓರ್ವ ಮೃತಪಟ್ಟಿದ್ದು ನಾಲ್ಕೈದು ಜನ ಅಸ್ವಸ್ಥರಾಗಿರುವ ಘಟನೆ ತುಮಕೂರಿನ ಮಾರುತಿ ನಗರದಲ್ಲಿ ನಡೆದಿದೆ. ಕೋತಿ ಕೀಟಲೆ ಮಾಡಿದ ಹಿನ್ನೆಲೆ ಏಕಾಏಕಿ ಹಲವರ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಕಾರು ಶೋರೂಂ ಮೇಲ್ವಿಚಾರಕರಾಗಿದ್ದ ವಿಜಯ್ ಪ್ರಕಾಶ್(65) ಘಟನೆಯಲ್ಲಿ ದಾರುಣವಾಗಿ ಮೃತಪಟ್ಟಿದ್ದು, ಕೆಲಸ ಮುಗಿಸಿ ನಿನ್ನೆ ಸಂಜೆ ಮನೆಗೆ ಬರುವಾಗ ಮಾರುತಿ ನಗರದ ಪಿಎನ್ ಟಿ ಕ್ವಾಟ್ರಸ್ ಬಳಿ ಮರದಲ್ಲಿದ್ದ ಹೆಜ್ಜೇನು ಹಲವರ ಜೊತೆ ಇವರ ಮೇಲೂ ದಾಳಿ ನಡೆಸಿತ್ತು.

ಬೈಕ್​​ನಲ್ಲಿ ಬರುತ್ತಿದ್ದ ವೇಳೆ ಹೆಜ್ಜೇನು ದಾಳಿ ಮಾಡಲು ಆರಂಭಿಸಿದ ಕಾರಣ ಅವುಗಳಿಂದ ತಪ್ಪಿಸಿಕೊಳ್ಳಲು ವಿಜಯ್ ಪ್ರಕಾಶ್ ಹರಸಾಹಸ ಪಟ್ಟಿದ್ದರು. ಶರ್ಟ್ ಬಿಚ್ಚಿ ಅವನ್ನು ಓಡಿಸಲು ಪ್ರಯತ್ನ ಮಾಡಿದ್ದರು. ಹೀಗಿದ್ದರೂ ಐವತ್ತಕ್ಕೂ ಅಧಿಕ ಜೇನು ನೊಣಗಳು ಅವರ ಮುಖ ಸೇರದಂತೆ ದೇಹದ ಹಲವು ಭಾಗಗಳ ಮೇಲೆ ದಾಳಿ ನಡೆಸಿದ್ದವು. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರು ತನ್ನದಲ್ಲದ ತಪ್ಪಿಗೆ ಜೀವ ತೆತ್ತಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ತಂದೆಯ ಸಾವಿಗೆ ಕಂಗಾಲಾಗಿರುವ ಮಗಳು ಕಣ್ಣೀರಿಟ್ಟಿದ್ದಾರೆ. ನಮ್ಮ ಅಪ್ಪನಿಗೆ ಬಂದ ಪರಿಸ್ಥಿತಿ ಮತ್ತೆ ಯಾರಿಗೂ ಬಾರದಿರಲಿ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಿ ಎಂಬ ಆಗ್ರಹವನ್ನು ವ್ಯಕ್ತಪಡಿಸಿದ್ದಾರೆ. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮನೆ ಮೇಲ್ಚಾವಣಿ ಕುಸಿದು ಮಹಿಳೆ ಸಾವು

ಮಳೆಗೆ ಮನೆ ಮೇಲ್ಚಾವಣಿ ಕುಸಿದು ಬಿದ್ದ ಪರಿಣಾಮ ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದ 14ನೇ ವಾರ್ಡ್​​ನಲ್ಲಿ ಮಹಿಳೆಯೋರ್ವರು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಈಶಮ್ಮ(60) ಮೃತಳಾಗಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಈಶಮ್ಮ ಮಸ್ಕಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *