Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಡಿಜಿಪಿ ರಾಮಚಂದ್ರರಾವ್ ಹೆಸರು ಬಳಸಿ ನಟಿ ರನ್ಯಾರಾವ್‌ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ಸೌಲಭ್ಯ ಪಡೆದಿದ್ದೇಕೆ?

Spread the love

ಬೆಂಗಳೂರು : ತಮ್ಮ ಮಲ ತಂದೆ ಹಾಗೂ ಡಿಜಿಪಿ ರಾಮಚಂದ್ರರಾವ್‌ ಹೆಸರು ಬಳಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ನಟಿ ರನ್ಯಾರಾವ್‌ ಶಿಷ್ಟಾಚಾರ ಸೌಲಭ್ಯ ಪಡೆದ ವಿಚಾರ ಪೊಲೀಸರ ಲೆಡ್ಜರ್‌ನಲ್ಲಿ ಬಹಿರಂಗವಾಗಿದೆ ಎಂದು ತಿಳಿದು ಬಂದಿದೆ.
ಈ ಲೆಡ್ಜರ್‌ ಅನ್ನು ಶಿಷ್ಟಾಚಾರ ದುರ್ಬಳಕೆ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ತಂಡ ವಶಕ್ಕೆ ಪಡೆದು ಪರಿಶೀಲಿಸಿದೆ. ಈ ಪುಸಕ್ತ ಡಿಜಿಪಿ ರಾಮಚಂದ್ರರಾವ್‌ಗೆ ಸಂಕಷ್ಟ ತಂದೊಡ್ಡಿದೆ ಎಂದು ಉನ್ನತ ಮೂಲಗಳು ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿವೆ.

ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ನಿರ್ವಹಣೆ ಸಂಬಂಧ ಪ್ರತ್ಯೇಕವಾದ ಪೊಲೀಸ್‌ ವಿಭಾಗವಿಲ್ಲ. ಶಿಷ್ಟಾಚಾರ ವಿಭಾಗ ಸಂಪೂರ್ಣವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಡಿಎಪಿಆರ್‌) ಇಲಾಖೆ ವ್ಯಾಪ್ತಿಗೆ ಬರುತ್ತಿದೆ. ಆದರೆ ವಿಮಾನ ನಿಲ್ದಾಣಕ್ಕೆ ಬರುವ ಹಿರಿಯ ಐಪಿಎಸ್‌ ಪೊಲೀಸ್ ಅಧಿಕಾರಿಗಳ (ಎಸ್‌ಪಿ-ಡಿಸಿಪಿ ಮೇಲ್ಮಟ್ಟದ) ನೆರವಿಗೆ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ‘ಸಹಾಯಕ ವಿಭಾಗ (ಅಸಿಸ್ಟೆನ್ಸ್‌)’ ಇದೆ. ಈ ಅಸಿಸ್ಟೆನ್ಸ್‌ಗಳನ್ನು ವಾಕಿಗಳು ಎಂದು ಕರೆಯುತ್ತಾರೆ. ಪ್ರಸ್ತುತ ಅಸಿಸ್ಟೆನ್ಸ್‌ ವಿಭಾಗದಲ್ಲಿ ಹೆಡ್‌ ಕಾನ್‌ಸ್ಟೇಬಲ್‌ಗಳಾದ ಬಸವರಾಜು, ಮಹಾಂತೇಶ್ ಹಾಗೂ ವೆಂಕಟರಾಜು ಕಾರ್ಯನಿರ್ವಹಿಸುತ್ತಾರೆ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಹಿರಿಯ ಅಧಿಕಾರಿಗಳನ್ನು ಬರಮಾಡಿಕೊಂಡು ಅವರಿಗೆ ವಿಮಾನ ನಿಲ್ದಾಣದೊಳಗೆ ಚೆಕ್‌ ಇನ್‌ ಮಾಡಿಸಿ ಲಾಂಜ್‌ನಲ್ಲಿ ವಿಶ್ರಾಂತಿಗೆ ವ್ಯವಸ್ಥೆ ಕಲ್ಪಿಸುತ್ತಾರೆ. ಈ ಸೌಲಭ್ಯ ಅಧಿಕಾರಿಗಳಿಗೆ ಸೀಮಿತವೇ ಹೊರತು ಅವರ ಕುಟುಂಬದವರಿಗೆ ಇರುವುದಿಲ್ಲ. ಆದರೆ ಕೆಲ ಬಾರಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಅವರ ಕುಟುಂಬದವರಿಗೂ ಪೊಲೀಸರು ನೆರವು ನೀಡುತ್ತಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.


Spread the love
Share:

administrator

Leave a Reply

Your email address will not be published. Required fields are marked *