Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸ್ಯಾಂಕಿ ಟ್ಯಾಂಕ್‌ನಲ್ಲಿ ಕಾವೇರಿ ಆರತಿ: ಸರ್ಕಾರದ ಕಾರ್ಯಕ್ರಮವೇ, ರಾಜಕೀಯವಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

Spread the love

ಬೆಂಗಳೂರು : ಸ್ಯಾಂಕಿ ಟ್ಯಾಂಕ್‌ನಲ್ಲಿ ಆಯೋಜಿಸಿರುವ ಕಾವೇರಿ ಆರತಿ ಸರ್ಕಾರಿ ಕಾರ್ಯಕ್ರಮವೇ ಹೊರತು ರಾಜಕೀಯ ಕಾರ್ಯಕ್ರಮವಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್  ಗುರುವಾರ ಸ್ಪಷ್ಟಪಡಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಮಾರ್ಚ್ 22 ರಂದು ವಿಶ್ವ ಜಲ ದಿನಾಚರಣೆ . ಹೀಗಾಗಿ ನಾಳೆ ಕಾವೇರಿ ಆರತಿಯ ಜೊತೆಗೆ ರಾಜ್ಯದಲ್ಲಿ ಒಂದು ತಿಂಗಳ ಕಾಲ ಜಲ ಸಂರಕ್ಷಣಾ ಅಭಿಯಾನವನ್ನು  ಆರಂಭಿಸಲಾಗುವುದು ಎಂದು ಹೇಳಿದರು.ಸರ್ಕಾರವು ತನ್ನ ಜಲ ಸಂರಕ್ಷಣಾ ಪ್ರಯತ್ನಗಳ ಭಾಗವಾಗಿ ಸ್ಯಾಂಕಿ ಟ್ಯಾಂಕ್‌ನಲ್ಲಿ ಕಾವೇರಿ ಆರತಿಯನ್ನು ಆಯೋಜಿಸಿದೆ.

ಇದು ಸಂಪೂರ್ಣವಾಗಿ ಸರ್ಕಾರಿ ಕಾರ್ಯಕ್ರಮ, ಆದರೂ ಕೆಲವರು ಇದರ ವಿರುದ್ಧ ನ್ಯಾಯಾಲಯಕ್ಕೆ ಹೋಗಿದ್ದಾರೆ. ನಾವು ಈ ಪ್ರಕರಣವನ್ನು ಕಾನೂನುಬದ್ಧವಾಗಿ ಎದುರಿಸುತ್ತೇವೆ ಎಂದಿದ್ದಾರೆ.ಜಲ ಸಂರಕ್ಷಣೆಯ ಅಗತ್ಯವನ್ನು ಎತ್ತಿ ತೋರಿಸಿದ ಅವರು, ಅನೇಕ ಜನರು ಕಾರುಗಳನ್ನು ತೊಳೆಯಲು ಮತ್ತು ತೋಟಗಳಿಗೆ ನೀರುಣಿಸಲು ಕುಡಿಯುವ ನೀರನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ.

ಹೀಗೆ ಸುಮಾರು ಶೇ 20ರಷ್ಟು ಕುಡಿಯುವ ನೀರು ವ್ಯರ್ಥವಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರತಿಜ್ಞಾ ಸ್ವೀಕಾರಮಾಡಿಸಲಾಗುವುದು. ಇನ್ನು ಕೆಆರ್​​ಎಸ್​​ನಲ್ಲಿ ಕಾವೇರಿ ಆರತಿ ಮಾಡಲು ನಾನು ಈ ಹಿಂದೆಯೇ ಘೋಷಣೆ ಮಾಡಿದ್ದೆ. ಅದರ ಭಾಗವಾಗಿ ನಾಳೆ ಸ್ಯಾಂಕಿ ಕೆರೆಯಲ್ಲಿ ಪೂಜೆ ನೆರವೇರಿಸಲಾಗುವುದು ಎಂದು ಹೇಳಿದರು.

ಹಲವು ಸ್ಥಳಗಳನ್ನು ಪರಿಶೀಲನೆ ಮಾಡಿದ ನಂತರ ಈ ಸ್ಥಳದಲ್ಲಿ ಕಾವೇರಿ ಆರತಿ ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಡಿಸಿಎಂ ತಿಳಿಸಿದರು.ಈ ಹಿಂದೆ ಸ್ಯಾಂಕಿ ಟ್ಯಾಂಕ್ ನಲ್ಲಿ ಕನ್ನಡ ರಾಜ್ಯೋತ್ಸವಮತ್ತು ಶಾಸಕರ ಹುಟ್ಟುಹಬ್ಬ ಸೇರಿದಂತೆ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳನ್ನುಆಯೋಜಿಸಲಾಗಿದೆ.

ಆದಾಗ್ಯೂ, ಕೆಲವು ಬಿಜೆಪಿ ನಾಯಕರು  ಕಾವೇರಿ ಆರತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ ಎಂದರು. ಇನ್ನು ಹಲವು ವಿರೋಧಗಳ ನಡುವೆ ನಗರದ ಸ್ಯಾಂಕಿ ಕೆರೆಯ ಬಫರ್‌ ವಲಯದಲ್ಲಿ ಶುಕ್ರವಾರ ನಿಗದಿಯಾಗಿರುವ ಕಾವೇರಿ ಆರತಿ ಕಾರ್ಯಕ್ರಮ ಆಯೋಜನೆಗೆ ಕರ್ನಾಟಕ ಹೈಕೋರ್ಟ್‌  ಅನುಮತಿ ನೀಡಿದೆ. ಇದರಿಂದ ಬೆಂಗಳೂರು ಜಲಮಂಡಳಿ ಈ ಕಾರ್ಯಕ್ರಮವನ್ನು ಆಯೋಜಿಸಬಹುದಾಗಿದೆ.


Spread the love
Share:

administrator

Leave a Reply

Your email address will not be published. Required fields are marked *