ಕರ್ನಾಟಕ ಬಂದ್: ನಾಳೆ ಶಾಲೆಗಳಿಗೆ ರಜೆಯಾ?

ಬೆಂಗಳೂರು: ಕನ್ನಡಪರ ಸಂಘಟನೆಗಳು ನಾಳೆ (ಮಾ. 22ರಂದು) ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಇಂದಿನಿಂದಲೇ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಿವೆ. ಮತ್ತೊಂದೆಡೆ ಶಾಲೆಗಳಿಗೆ ರಜೆ ಇರುತ್ತಾ? ಬಂದ್ ಹಿನ್ನೆಲೆ ನಾಳೆ ಪರೀಕ್ಷೆಗಳಿದ್ದರೆ ಅವು ಪೋಸ್ಟ್ ಪೋನ್ ಆಗ್ತಾವಾ ಎಂಬುದು ಎಲ್ಲರಲ್ಲೂ ಗೊಂದಲ ಮೂಡಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.
ನಾಳೆ ಕರ್ನಾಟಕ ಬಂದ್ ಹಿನ್ನೆಲೆ, ಶಾಲೆ ಬಂದ್ ಆಗುವ ವಿಚಾರವಾಗಿ ಮಾತನಾಡಿದ ಅವರು, ಈವರೆಗೆ ಶಾಲೆ ಬಂದ್ ಮಾಡುವ ನಿರ್ಧಾರ ಮಾಡಿಲ್ಲ. ಮಧ್ಯಾಹ್ನ ಗೃಹ ಸಚಿವ ಹಾಗೂ ಸಾರಿಗೆ ಸಚಿವರ ಜೊತೆ ಸಭೆ ಮಾಡ್ತೇನೆ. ಅವರು ಏನು ಹೇಳ್ತಾರೆ ಅದರ ಮೇಲೆ ನಿರ್ಧಾರ ಪ್ರಕಟ ಮಾಡ್ತೇನೆ ಎಂದು ಹೇಳಿದ್ದಾರೆ.
ಸಾರಿಗೆ ಹಾಗೂ ಭದ್ರತೆ ಇಲ್ಲದೆ ಶಾಲೆ ಓಪನ್ ಮಾಡೋಕೆ ಆಗಲ್ಲ. ನಾಳೆ ಮೌಲ್ಯಾಂಕನ ಪರೀಕ್ಷೆ ಇದೆ. ಹೀಗಾಗಿ ಮುಂದೂಡಲು ನಾವು ಸಿದ್ಧವಾಗಿದ್ದೇವೆ. ಆದರೆ ಗೃಹ ಇಲಾಖೆ ಹಾಗೂ ಸಾರಿಗೆ ಇಲಾಖೆಯ ನಿರ್ಧಾರ ನೋಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.