ಬಂಗಾಳ-ಅಸ್ಸಾಂ ಫಲಿತಾಂಶ ಜನಾದೇಶದ ‘ಕಳ್ಳತನ’: ಬಿಜೆಪಿಯ ವಿರುದ್ಧ ರಾಹುಲ್ ಗಾಂಧಿ ಕಿಡಿ

ಚೆನ್ನೈ: ವಿಧಾನಸಭಾ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಎಂ.ಕೆ. ಸ್ಟಾಲಿನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಯನ್ನು ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅಂಗೀಕರಿಸಿದ್ದಾರೆ. ಡಿಎಂಕೆ ಪಕ್ಷದ ಸೋಲಿನ ನಂತರ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗೆ ಈ ಕ್ರಮವು ಔಪಚಾರಿಕವಾಗಿ ದಾರಿ ಮಾಡಿಕೊಟ್ಟಿದೆ.
ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಸ್ಟಾಲಿನ್ ಅವರು ಮಂಗಳವಾರ ಮಧ್ಯಾಹ್ನ ತಮ್ಮ ಕ್ಷೇತ್ರವಾದ ಕೊಳತ್ತೂರಿಗೆ ಭೇಟಿ ನೀಡಲಿದ್ದಾರೆ. ಚುನಾವಣಾ ಫಲಿತಾಂಶದ ನಂತರ ಜನರ ಬೆಂಬಲಕ್ಕೆ ಧನ್ಯವಾದ ಹೇಳುವುದು ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸುವುದು ಈ ಭೇಟಿಯ ಉದ್ದೇಶವಾಗಿದೆ ಎಂದು ತಿಳಿದುಬಂದಿದೆ.
ಇದೇ ವೇಳೆ, ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಿರುವ ಡಿಎಂಕೆ, ಸಾರ್ವಜನಿಕರೊಂದಿಗೆ ಸಂಪರ್ಕವನ್ನು ಮುಂದುವರಿಸುವುದರ ಜೊತೆಗೆ ವಿಧಾನಸಭೆಯಲ್ಲಿ ರಚನಾತ್ಮಕ ವಿರೋಧ ಪಕ್ಷದ ಪಾತ್ರ ವಹಿಸುವುದಾಗಿ ತಿಳಿಸಿದೆ.
