Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಕ್ರಮ ಮರಳು ದಾಸ್ತಾನು ಮೇಲೆ ಪೊಲೀಸರ ದಾಳಿ: 2 ಟನ್ ಮರಳು ವಶ.

Spread the love

ಉಪ್ಪಿನಂಗಡಿ: ಕರಾಯ ಗ್ರಾಮದ ಹುಣಸೇಕಟ್ಟೆ ಎಂಬಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಮರಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿದ್ದು, ಪ್ರಕರಣ ದಾಖಲಿಸಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣಾ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಅನನ್ಯ ಶ್ರೀವಾಸ್ತವ್ ಗಸ್ತು ನಿರತರಾಗಿದ್ದ ವೇಳೆ ಅಕ್ರಮ ಮರಳು ಶೇಖರಣೆಯಾಗಿರುವುದನ್ನು ಕಂಡು ಪರಿಶೀಲಿಸಲಾಗಿ, ಹುಸೇನ್ ಎಂಬವರಿಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಮರಳು ದಾಸ್ತಾನಿರಿಸಿರುವುದು ಕಂಡು ಬಂದಿದೆ. ಸುಮಾರು ಎರಡು ಟನ್‌ನಷ್ಟು ಮರಳನ್ನು ಕುಪ್ಪೆಟ್ಟಿ ಹೊಳೆಯಿಂದ ಅಕ್ರಮವಾಗಿ ಸಂಗ್ರಹಿಸಿ ಇಲ್ಲಿ ಶೇಖರಿಸಿಡಲಾಗಿದೆ ಎನ್ನಲಾಗಿದೆ. ಅಕ್ರಮ ಮರಳನ್ನು ವಶಪಡಿಸಿಕೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *