Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಲೇಹ್ ಹಿಂಸಾಚಾರ ತನಿಖೆ ಅಂತಿಮ ಹಂತಕ್ಕೆ: 93 ಸಾಕ್ಷಿಗಳ ಹೇಳಿಕೆ ದಾಖಲು.

Spread the love

ಲೇಹ್/ಜಮ್ಮು: 2025ರ ಸೆಪ್ಟೆಂಬರ್ 24ರಂದು ಲೇಹ್ ನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದ ನ್ಯಾಯಾಂಗ ವಿಚಾರಣೆ ಅಂತಿಮ ಹಂತ ತಲುಪಿದೆ. ಇದುವರೆಗೆ 93 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ ಎಂದು ವಿಚಾರಣಾ ಆಯೋಗದ ಜಂಟಿ ಕಾರ್ಯದರ್ಶಿ ರಿಗ್ವಿನ್ ಸ್ಪಾಲ್ಡನ್ ತಿಳಿಸಿದ್ದಾರೆ.
ವಿಚಾರಣೆಯ ಮೂರನೇ ಅಧಿವೇಶನ ನಡೆಯುತ್ತಿದ್ದು, ಇದೇ ಅಂತಿಮ ಹಂತವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಲೇಜ್‌ನಲ್ಲಿ ಕಳೆದ ವರ್ಷ ಉಂಟಾದ ಕಾನೂನು ಮತ್ತು ಸುವ್ಯವಸ್ಥೆ ಬಿಕ್ಕಟ್ಟಿನ ಕುರಿತು ತನಿಖೆ ನಡೆಸಲು ಕೇಂದ್ರ ಗೃಹ ಸಚಿವಾಲಯವು 2025ರ ಅಕ್ಟೋಬರ್ 17ರಂದು ನ್ಯಾಯಾಂಗ ವಿಚಾರಣಾ ಆಯೋಗವನ್ನು ರಚಿಸಿತ್ತು.

ಹಿಂಸಾಚಾರದ ವೇಳೆ ಪೊಲೀಸರು ಕೈಗೊಂಡ ಕ್ರಮಗಳು, ಪೊಲೀಸ್ ಗುಂಡಿನ ದಾಳಿಗೆ ಕಾರಣವಾದ ಸಂದರ್ಭಗಳು ಹಾಗೂ ಅದರಲ್ಲಿ 1999ರ ಕಾರ್ಗಿಲ್ ಯುದ್ಧದ ಯೋಧ ಸೇರಿದಂತೆ ನಾಲ್ವರು ಸಾವಿಗೀಡಾದ ಘಟನೆಗಳ ಬಗ್ಗೆ ಆಯೋಗ ತನಿಖೆ ನಡೆಸುತ್ತಿದೆ.
ಘಟನೆಯ ವೇಳೆ ನಡೆದ ಪೊಲೀಸ್ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದು, 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಪ್ರತಿಭಟನಾಕಾರರು ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದ್ದಲ್ಲದೆ, ಖಾಸಗಿ ಮತ್ತು ಸರಕಾರಿ ವಾಹನಗಳಿಗೂ ಬೆಂಕಿ ಹಚ್ಚಿದ್ದರು.
ಜಿಲ್ಲಾ ಮತ್ತು ಸೆಷನ್ಸ್ ನಿವೃತ್ತ ನ್ಯಾಯಾಧೀಶ ಮೋಹನ್ ಸಿಂಗ್ ಪರಿಹಾರ್ ಆಯೋಗದ ಅಧ್ಯಕ್ಷರಾಗಿದ್ದು, ವಕೀಲ ಹಿಮಾಂಶು ಶರ್ಮಾ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಲಡಾಖ್‌ಗೆ ಆರನೇ ಅನುಸೂಚಿ ಸ್ಥಾನಮಾನ ಮತ್ತು ರಾಜ್ಯ ಹುದ್ದೆ ನೀಡುವಂತೆ ಆಗ್ರಹಿಸಿ ಲೇಹ್ ಅಪೆಕ್ಸ್‌ ಸಮಿತಿ ಹಾಗೂ ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ ಜಂಟಿಯಾಗಿ ಹೋರಾಟ ನಡೆಸುತ್ತಿವೆ. ಸೆಪ್ಟೆಂಬರ್ 24ರ ಹಿಂಸಾಚಾರದ ಕುರಿತು ಲೆಫ್ಟಿನೆಂಟ್ ಗವರ್ನರ್ ಆಡಳಿತ ಆದೇಶಿಸಿದ್ದ ಮ್ಯಾಜಿಸ್ಟೀರಿಯಲ್ ತನಿಖೆಯನ್ನು ಈ ಸಂಘಟನೆಗಳು ತಿರಸ್ಕರಿಸಿದ್ದವು. ನಂತರ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದರಿಂದ ಆಯೋಗ ರಚಿಸಲಾಗಿತ್ತು.
ಲೇಹ್ ಅಪೆಕ್ಸ್ ಸಮಿತಿಯ ಮನವಿಯ ಮೇರೆಗೆ, ಸಾಕ್ಷ್ಯ ಮತ್ತು ಹೇಳಿಕೆಗಳನ್ನು ಸಲ್ಲಿಸಲು ನೀಡಿದ್ದ ಗಡುವನ್ನು ಆಯೋಗ ಹಲವು ಬಾರಿ ವಿಸ್ತರಿಸಿತ್ತು.


Spread the love
Share:

administrator

Leave a Reply

Your email address will not be published. Required fields are marked *