ಕೇಳಿದ ಜಾಗದಲ್ಲಿ ಬಸ್ ನಿಲ್ಲಿಸದ್ದಕ್ಕೆ ಮಹಿಳೆ ರೌದ್ರಾವತಾರ: ಎಮರ್ಜೆನ್ಸಿ ಸುತ್ತಿಗೆಯಿಂದ ಕೆಎಸ್ಆರ್ಟಿಸಿ ಬಸ್ ಗಾಜು ಧ್ವಂಸ!

ಕೋಝಿಕೋಡ್: ನಿಗದಿತ ಬಸ್ ನಿಲ್ದಾಣದಲ್ಲಿ ಚಾಲಕ ನಿಲ್ಲಿಸಲು ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬರು ಕೆಎಸ್ಆರ್ಟಿಸಿ ಸೂಪರ್ ಫಾಸ್ಟ್ ಪ್ರೀಮಿಯಂ ಬಸ್ನ ಕಿಟಕಿಯನ್ನು ಒಡೆದಿದ್ದಾರೆ
ಕೋಝಿಕ್ಕೋಡ್ನ ಮಿಮ್ಸ್ ಆಸ್ಪತ್ರೆಯ ಬಳಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಮಹಿಳೆ ಆಸ್ಪತ್ರೆಯ ಬಳಿ ಬಸ್ ನಿಲ್ಲಿಸುವಂತೆ ಚಾಲಕನಿಗೆ ಕೇಳಿಕೊಂಡಳು. ಆದರೆ, ಅದು ಅಧಿಕೃತ ಬಸ್ ನಿಲ್ದಾಣವಲ್ಲದ ಕಾರಣ ವಾಹನ ಅಲ್ಲಿ ನಿಲ್ಲಿಸಲು ಸಾಧ್ಯವಿಲ್ಲ ಎಂದು ಚಾಲಕ ಮತ್ತು ಕಂಡಕ್ಟರ್ ಅವರಿಗೆ ತಿಳಿಸಿದರು. ಇದು ಬಸ್ಸಿನೊಳಗೆ ವಾಗ್ವಾದಕ್ಕೆ ಕಾರಣವಾಯಿತು ಎಂದು ವರದಿಯಾಗಿದೆ.
ಗಲಾಟೆಯ ಸಮಯದಲ್ಲಿ, ಮಹಿಳೆ ತನ್ನ ಮೊಬೈಲ್ ಫೋನ್ನಲ್ಲಿ ಚಾಲಕ ಮತ್ತು ಕಂಡಕ್ಟರ್ನ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾಳೆ ಎನ್ನಲಾಗಿದೆ. ನಂತರ ಅವಳು ಬನ್ನೊಳಗೆ ಇರಿಸಲಾಗಿದ್ದ ತುರ್ತು ಗಾಜು ಒಡೆಯುವ ಸುತ್ತಿಗೆಯನ್ನು ಬಳಸಿ ಮುಂಭಾಗದ ಬಾಗಿಲಿನ ಗಾಜನ್ನು ಒಡೆದಳು.
ಮೂರು ದಿನಗಳ ಹಿಂದೆ ನಡೆದಿರಬಹುದೆಂದು ಹೇಳಲಾಗುತ್ತಿರುವ ಈ ಘಟನೆಯ ವೀಡಿಯೊಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.
ನಂತರ ಕೆಎಸ್ಆರ್ಟಿಸಿ ಸಿಬ್ಬಂದಿ ಮತ್ತು ಮಹಿಳೆ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಪೊಲೀಸ್ ಠಾಣೆಯ ಮುಂದೆ ಹಾಜರಾದರು ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಗೆ ಉಂಟಾದ ಹಾನಿಗೆ ಪರಿಹಾರ ನೀಡುವುದಾಗಿ ಅಧಿಕಾರಿಗಳಿಗೆ ಭರವಸೆ ನೀಡಿದ ನಂತರ ಮಹಿಳೆಯನ್ನು ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.
