Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಜೀಪ್-ಮೀನಿನ ಲಾರಿ ಮುಖಾಮುಖಿ ಡಿಕ್ಕಿ; ಕೇರಳ ಮೂಲದ ಇಬ್ಬರು ಮಹಿಳೆಯರು ಸಾ*ವು, 8 ಮಂದಿಗೆ ಗಾಯ!

Spread the love

ಕುಂದಾಪುರ: ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಜೀಪ್ ಹಾಗೂ ಮೀನು ಸಾಗಾಟದ ಲಾರಿ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಮೂವರು ಪುಟಾಣಿ ಮಕ್ಕಳು ಸೇರಿದಂತೆ ಒಟ್ಟು ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಕೇರಳ ಮೂಲದ ಜ್ಯೋತಿ (35) ಹಾಗೂ ಆರ್ಯ ಅನೂಪ್ (28) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಜೀಪ್‌ನಲ್ಲಿದ್ದ ಪ್ರವಾಸಿಗರು ಹಾಗೂ ಚಾಲಕ ಸೇರಿದಂತೆ ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅಯನ್ (5), ಅವನಿ (8), ಅರ್ಜುನ್ (9), ಮಿನಿ (60), ಅಭಿ (36), ಅನೂಪ್ (37), ಜ್ಯೋತಿಷ್ (43) ಮತ್ತು ಜೀಪು ಚಾಲಕ ದೇವರಾಜ್ ಎಂದು ಗುರುತಿಸಲಾಗಿದೆ. ಇವರೆಲ್ಲರಿಗೂ ಕುಂದಾಪುರ ಹಾಗೂ ಮಣಿಪಾಲದ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಮತ್ತು ಗಾಯಾಳುಗಳೆಲ್ಲರೂ ಕೇರಳ ರಾಜ್ಯದ ಒಂದೇ ಕುಟುಂಬದ ಪ್ರವಾಸಿಗರು ಎಂದು ತಿಳಿದುಬಂದಿದೆ.

ಕೊಡಚಾದ್ರಿ ಬೆಟ್ಟ ವೀಕ್ಷಿಸಿ ಕೊಲ್ಲೂರಿನತ್ತ ಮರಳುತ್ತಿದ್ದ ಜೀಪ್ ಹಾಗೂ ಕೊಲ್ಲೂರಿನಿಂದ ನಾಗೋಡಿ ಕಡೆಗೆ ಸಾಗುತ್ತಿದ್ದ ಮೀನಿನ ಲಾರಿ ನಡುವೆ ದಳಿ ಎಂಬಲ್ಲಿ ಈ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕೊಲ್ಲೂರು ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *