Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಂಟ್ವಾಳ: ಒಂದೇ ಟಯರ್‌ನಲ್ಲಿ ಬಸ್ ಸಂಚಾರ- ಪ್ರಯಾಣಿಕರ ಜೀವದ ಜೊತೆ ಬಸ್ ಚಾಲಕ ಹಾಗೂ ನಿರ್ವಾಹಕರ ಚೆಲ್ಲಾಟ

Spread the love

ಬಂಟ್ವಾಳ: ವಿಟ್ಲ ಮತ್ತು ಮುಡಿಪು ನಡುವೆ ಸತತ ಎರಡು ದಿನಗಳಿಂದ ಒಂದೇ ಹಿಂಬದಿಯ ಟೈರ್‌ನೊಂದಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಸಂಚರಿಸುವ ‘ಸಾರಾ’ ಎಂಬ ಖಾಸಗಿ ಬಸ್ಸಿನ ಬಸ್ಸಿನ ಹಿಂದಿನ ಎಡಭಾಗದಲ್ಲಿ ಒಂದೇ ಚಕ್ರದಲ್ಲಿ ಸಂಚರಿಸುತ್ತಿತ್ತು. ಇನ್ನೊಂದು ಟಯರ್ ಒಡೆದು ವಿಚಿತ್ರ ಶಬ್ದ ಬರುತ್ತಿದ್ದರೂ ಚಾಲಕ, ನಿರ್ವಾಹಕ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಶನಿವಾರ ಮಧ್ಯಾಹ್ನದಿಂದ ರವಿವಾರ ಮಧ್ಯಾಹ್ನ ತನಕ ವಿಟ್ಲ ಮುಡಿಪು ಮಂಗಳೂರು ಮಧ್ಯೆ ಹಿಂಬದಿಯ ಒಂದೇ ಟಯರ್ ನಲ್ಲಿ ಸಂಚರಿಸುತ್ತಿದ್ದುದ್ದನ್ನು ಗಮನಿಸಿದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪ್ರಯಾಣಿಕರ ಜೀವದ ಜೊತೆ ಬಸ್ ಚಾಲಕ ಹಾಗೂ ನಿರ್ವಾಹಕ ಚೆಲ್ಲಾಟ ಆಡುತ್ತಿದ್ದರೆಂದು ಪ್ರಯಾಣಿಕರು ಆರೋಪಿಸಿ, ಸಾಲೆತ್ತೂರು ಪೇಟೆಯಲ್ಲಿ ಬಸ್ಸನ್ನು ತಡೆ ಹಿಡಿದು ವಿಟ್ಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಘಟನೆ ಬಗ್ಗೆ ಬಂಟ್ವಾಳ ಸಾರಿಗೆ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *