Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು: ಪೋಷಕರು ಮತ್ತು ತಂಗಿಯನ್ನೇ ಬರ್ಬರವಾಗಿ ಕೊಲೆಗೈದ ಯುವತಿ; ಲಿವ್-ಇನ್ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದೇ ಕಾರಣ!

Spread the love

ಬೆಂಗಳೂರು: ತಂದೆ-ತಾಯಿ ಮತ್ತು ಮಗಳನ್ನು ಬರ್ಬರವಾಗಿ ಕೊಲೆ ಮಾಡಿರುವ ಬೆಚ್ಚಿ ಬೀಳಿಸುವ ಘಟನೆ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೆಹಳ್ಳಿ ಎಂಬಲ್ಲಿ ರವಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ಸೋಮಸುಂದರ(55), ಮುತ್ತುಲಕ್ಷ್ಮೀ (48) ಮತ್ತು ಅವರ ಪುತ್ರಿ ಸುಪ್ರಿಯಾ(20) ಕೊಲೆಯಾದವರು. ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಲಾಗಿದೆ. ಇವರ ಇನ್ನೋರ್ವ ಪುತ್ರಿ ಶ್ವೇತಾ ಮತ್ತು ಆಕೆಯ ಪ್ರಿಯಕರ ಕೆನತ್ ಎಂಬಾತನ ಜೊತೆ ಸೇರಿ ಈ ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದೆ.
ಕೆನತ್ ಜೊತೆ ಶ್ವೇತಾ ಲಿವ್-ಇನ್ ರಿಲೇಷನ್ ಶಿಪ್ ನಲ್ಲಿದ್ದು, ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಇದೇ ಕಾರಣಕ್ಕೆ ಹೆತ್ತವರನ್ನು ಹಾಗೂ ತಂಗಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *