Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರೈಲು ಪ್ರಯಾಣದ ವೇಳೆ ಬರ್ಬರ ಹತ್ಯೆ: ಬಾಗಿಲು ಮುಚ್ಚುವ ತಕರಾರಿನಲ್ಲಿ ಪ್ರಾಣ ಕಳೆದುಕೊಂಡ ಯುವಕ!

Spread the love

ಮುಂಬೈ: ಭಾರೀ ಮಳೆಯ ನಡುವೆ ರೈಲು ಬೋಗಿಯ ಬಾಗಿಲು ಮುಚ್ಚುವ ವಿಚಾರದಲ್ಲಿ ನಡೆದ ವಾಗ್ವಾದದ ನಂತರ, 22 ವರ್ಷದ ಯುವಕನನ್ನು ಮುಂಬೈ ಲೋಕಲ್ ರೈಲಿನಲ್ಲೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತನನ್ನು ಮಯಾಂಕ್ ಲೋಹಾರ್ ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ಚರ್ಚ್‌ಗೇಟ್–ನಾಲಾಸೋಪಾರಾ ಫಾಸ್ಟ್ ಲೋಕಲ್ ರೈಲಿನ ಪ್ರಥಮ ದರ್ಜೆ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಅಂಧೇರಿ ಮತ್ತು ಬೊರಿವಲಿ ನಿಲ್ದಾಣಗಳ ನಡುವೆ ಮತ್ತೊಬ್ಬ ಪ್ರಯಾಣಿಕನೊಂದಿಗೆ ವಾಗ್ವಾದ ಉಂಟಾಯಿತು.

ವಾದ ತೀವ್ರಗೊಂಡಾಗ ಆರೋಪಿಯು ಮಯಾಂಕ್ ಲೋಹಾರ್ ಅವರ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ ಸುಮಾರು 11.04 ಗಂಟೆಗೆ ರೈಲು ಬೊರಿವಲಿ ನಿಲ್ದಾಣ ತಲುಪಿದಾಗ, ರೈಲು ಸಂಪೂರ್ಣವಾಗಿ ನಿಲ್ಲುವ ಮುನ್ನವೇ ಆರೋಪಿಯು ಪರಾರಿಯಾಗಿದ್ದಾನೆ.

ರೈಲ್ವೆ ರಕ್ಷಣಾ ಪಡೆ (RPF) ಮತ್ತು ಸರ್ಕಾರಿ ರೈಲ್ವೆ ಪೊಲೀಸ್ (GRP) ಸಿಬ್ಬಂದಿ ಕೆಲವೇ ನಿಮಿಷಗಳಲ್ಲಿ ಬೋಗಿಗೆ ತಲುಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಲೋಹಾರ್ ಅವರನ್ನು ಪತ್ತೆಹಚ್ಚಿದರು.

ತಕ್ಷಣವೇ ಸ್ಟ್ರೆಚರ್ ಮತ್ತು ವೈದ್ಯಕೀಯ ನೆರವು ಒದಗಿಸಿ, ಮೊದಲು ಬೊರಿವಲಿ ನಿಲ್ದಾಣದ ತುರ್ತು ವೈದ್ಯಕೀಯ ಕೊಠಡಿಗೆ ಹಾಗೂ ಬಳಿಕ ಕಾಂದಿವಲಿಯ ಶತಾಬ್ದಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು.

ಪಶ್ಚಿಮ ರೈಲ್ವೆ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಇತರ ಸಾಕ್ಷ್ಯಗಳನ್ನು ಸಂಗ್ರಹಿಸಿ ತನಿಖಾ ಸಂಸ್ಥೆಗಳಿಗೆ ಹಸ್ತಾಂತರಿಸಿದ್ದಾರೆ. ಹಿರಿಯ ಅಧಿಕಾರಿಗಳು ರಾತ್ರಿ ಪೂರ್ತಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದರು.

“ಗಾಯಗೊಂಡ ಪ್ರಯಾಣಿಕರಿಗೆ ತಕ್ಷಣ ವೈದ್ಯಕೀಯ ನೆರವು ಒದಗಿಸುವುದೇ ನಮ್ಮ ಮೊದಲ ಆದ್ಯತೆಯಾಗಿತ್ತು,” ಎಂದು ಪಶ್ಚಿಮ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ವಿನೀತ್ ಅಭಿಷೇಕ್ ತಿಳಿಸಿದ್ದಾರೆ.

ಘಟನೆಯ ವೇಳೆ ಬೋಗಿಯಲ್ಲಿ ಇದ್ದ ಪ್ರಯಾಣಿಕರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಲಾಗುತ್ತಿದೆ.

ಆರೋಪಿಯನ್ನು ರೋಷನ್ ಸುವರ್ಣ ಎಂದು ಗುರುತಿಸಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ರೈಲಿನ ಬಾಗಿಲು ತೆರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನನ್ನು ತರಾಟೆಗೆ ತೆಗೆದುಕೊಂಡಿದ್ದರಿಂದ ಅವಮಾನಗೊಂಡ ಭಾವನೆಯಿಂದ ರೋಷನ್ ಸುವರ್ಣ ಕೋಪಗೊಂಡಿದ್ದಾನೆ. ಬಳಿಕ ತನ್ನ ಬ್ಯಾಗಿನಿಂದ ದೊಡ್ಡ ಚಾಕುವನ್ನು ತೆಗೆದು, ವಿರಾರ್ ನಿವಾಸಿ ಮಯಾಂಕ್ ಲೋಹಾರ್ ಅವರ ಎದೆ ಮತ್ತು ಹೊಟ್ಟೆಗೆ ಹಲವು ಬಾರಿ ಇರಿದಿದ್ದಾನೆ. ಈ ದೃಶ್ಯ ಕಂಡ ಸಹಪ್ರಯಾಣಿಕರು ಬೆಚ್ಚಿಬಿದ್ದರು.

ತನ್ನ ಸ್ವಗ್ರಾಮವಾದ ಕರ್ನಾಟಕಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ, ಪನ್ವೇಲ್‌ನಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *