Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ: ಕೃಷಿ ಚಟುವಟಿಕೆಗಳಿಗೆ ಸಂಕಷ್ಟ, ರೈತರಲ್ಲಿ ಆತಂಕ!

Spread the love

ಕಾರವಾರ: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು, ರಾಜ್ಯದ 31 ಜಿಲ್ಲೆಗಳ ಪೈಕಿ 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಶೇ.50ಕ್ಕಿಂತ ಕಡಿಮೆ ಮಳೆಯಾಗಿದೆ.

ಆತಂಕಕಾರಿ ಸಂಗತಿಯೆಂದರೆ, ಸಾಮಾನ್ಯವಾಗಿ ಅಧಿಕ ಮಳೆ ಪಡೆಯುವ ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಶೇ.40ಕ್ಕಿಂತ ಕಡಿಮೆ ಪ್ರಮಾಣದ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳಿಗೆ ಭಾರೀ ಹೊಡೆತ ಬೀಳುವ ಆತಂಕ ಎದುರಾಗಿದೆ.

ಕೃಷಿ ಇಲಾಖೆ ಸಂಗ್ರಹಿಸಿರುವ ಜಿಲ್ಲಾವಾರು ಅಂಕಿ-ಅಂಶಗಳ ಪ್ರಕಾರ, ಜೂನ್ 26ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೃಷಿಗೆ ಅಗತ್ಯವಿರುವಷ್ಟು ಮಳೆಯಾಗಿಲ್ಲ ಎಂದು ತಿಳಿದುಬಂದಿದ್ದು, ಇದು ರೈತರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

ಅತಿ ಹೆಚ್ಚು ಮಳೆ ಕೊರತೆ ಎದುರಿಸುತ್ತಿರುವ ಜಿಲ್ಲೆಗಳ ಪೈಕಿ ಶಿವಮೊಗ್ಗದಲ್ಲಿ ಸಾಮಾನ್ಯ ಮಳೆಯ ಶೇ.36 ಮಾತ್ರ ದಾಖಲಾಗಿದ್ದು, ಶೇ.64ರಷ್ಟು ಕೊರತೆ ಕಂಡುಬಂದಿದೆ. ಕೊಡಗಿನಲ್ಲಿ ಶೇ.39ರಷ್ಟು ಮಾತ್ರ ಮಳೆಯಾಗಿದ್ದು, ಶೇ.61ರಷ್ಟು ಕೊರತೆ ದಾಖಲಾಗಿದೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಸುಮಾರು ಶೇ.60ರಷ್ಟು ಮಳೆ ಕೊರತೆ ಉಂಟಾಗಿದೆ.

ಜೂನ್ 26ರವರೆಗೆ ದಕ್ಷಿಣ ಕನ್ನಡದಲ್ಲಿ ಸಾಮಾನ್ಯವಾಗಿ 766 ಮಿ.ಮೀ. ಮಳೆಯಾಗಬೇಕಿದ್ದರೆ, ಕೇವಲ 306 ಮಿ.ಮೀ. ಮಳೆಯಾಗಿದೆ. ಚಿಕ್ಕಮಗಳೂರಿನಲ್ಲಿ 264 ಮಿ.ಮೀ. ಬದಲಿಗೆ 105 ಮಿ.ಮೀ., ಕೊಡಗಿನಲ್ಲಿ 429 ಮಿ.ಮೀ. ಬದಲಿಗೆ 168 ಮಿ.ಮೀ., ಶಿವಮೊಗ್ಗದಲ್ಲಿ 383 ಮಿ.ಮೀ. ಬದಲಿಗೆ 138 ಮಿ.ಮೀ. ಮಳೆಯಷ್ಟೇ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *