Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು: ಮೆಟ್ರೋ ರೈಲಿನಲ್ಲಿ ತಾಂತ್ರಿಕ ದೋಷದ ಭೀತಿ; ಬಾಗಿಲಿನಲ್ಲಿ ಸರಪಳಿ ಸಿಲುಕಿ ವ್ಯತ್ಯಯಗೊಂಡ ಮೆಟ್ರೋ ಸೇವೆ!

Spread the love

ಬೆಂಗಳೂರು: ಗುರುವಾರ ಸಂಜೆ ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲು ಬಾಗಿಲಿನ ಮಾರ್ಗದರ್ಶಿ ಮಾರ್ಗದಲ್ಲಿ ಪ್ರಯಾಣಿಕರ ಲೋಹದ ಸರಪಳಿ ಸಿಲುಕಿಕೊಂಡಿದ್ದರಿಂದ ಮೆಟ್ರೋ ಸೇವೆಗಳು ತಾತ್ಕಾಲಿಕವಾಗಿ ವ್ಯತ್ಯಯಗೊಂಡವು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಪ್ರಾಥಮಿಕ ತನಿಖೆ ತಿಳಿಸಿದೆ.

ಸಂಜೆ 7.36 ರಿಂದ 7.54 ರ ನಡುವೆ ನಡೆದ ಈ ಘಟನೆಯಿಂದಾಗಿ ರೈಲು ಬಾಗಿಲುಗಳು ಮುಚ್ಚಲು ವಿಫಲವಾದ ಕಾರಣ, ಮೆಟ್ರೋ ಕಾರ್ಯಾಚರಣೆಯ ಮೇಲೆ ಸ್ವಲ್ಪ ಸಮಯ ಪರಿಣಾಮ ಬೀರಿತು. ಘಟನೆಯ ನಂತರ, ಬಿಎಂಆರ್‌ಸಿಎಲ್‌ನ ಕಾರ್ಯಾಚರಣೆ ಮತ್ತು ನಿರ್ವಹಣಾ ತಂಡಗಳು ರೈಲು ಮತ್ತು ಅದರ ಬಾಗಿಲು ವ್ಯವಸ್ಥೆಗಳ ಪರಿಶೀಲನೆ ನಡೆಸಿದವು.

ಬಿಎಂಆರ್‌ಸಿಎಲ್ ಪ್ರಕಟಣೆಯ ಪ್ರಕಾರ, ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಗುರುವಾರ ಸಂಜೆ ಸಂಭವಿಸಿದ ಘಟನೆ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮತ್ತು ನಿರ್ವಹಣಾ ತಂಡಗಳು ತನಿಖೆ ನಡೆಸಿವೆ. ತನಿಖೆಯಲ್ಲಿ ಪ್ರಯಾಣಿಕರೊಬ್ಬರ ಮೆಟಲ್ ಚೈನ್ ರೈಲಿನ ಬಾಗಿಲಿನ ಡೋರ್ ಗೈಡ್‌ವೇನಲ್ಲಿ ಸಿಲುಕಿಕೊಂಡಿದ್ದು, ಇದರಿಂದ ಬಾಗಿಲು ಸರಿಯಾಗಿ ಮುಚ್ಚಿಕೊಳ್ಳಲಿಲ್ಲ.

ಪರಿಣಾಮವಾಗಿ ಸಂಜೆ 7.36ರಿಂದ 7.54ರವರೆಗೆ ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಯಿತು ಎಂದು ತಿಳಿಸಿದೆ. ರೈಲು ಹಾಗೂ ಅದರ ಬಾಗಿಲಿನ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಶೀಲಿಸಿದಾಗ ಯಾವುದೇ ತಾಂತ್ರಿಕ ದೋಷ ಕಂಡುಬಂದಿಲ್ಲ ಎಂದು ಬಿಎಂಆರ್‌ಸಿಎಲ್ ಹೇಳಿದೆ.

ಎಲ್ಲ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿದ ಬಳಿಕವೇ ರೈಲನ್ನು ಮತ್ತೆ ಸೇವೆಗೆ ಬಿಡಲಾಗಿದೆ ಎಂದು ನಿಗಮ ಸ್ಪಷ್ಟಪಡಿಸಿದೆ. ಪ್ರಯಾಣಿಕರ ಸುರಕ್ಷತೆಗೆ ಬಿಎಂಆರ್‌ಸಿಎಲ್ ಅತ್ಯುನ್ನತ ಆದ್ಯತೆ ನೀಡುತ್ತದೆ. ಸುರಕ್ಷಿತ, ವಿಶ್ವಾಸಾರ್ಹ ಹಾಗೂ ಪರಿಣಾಮಕಾರಿ ಮೆಟ್ರೋ ಸೇವೆ ನೀಡುವ ಬದ್ಧತೆ ಮುಂದುವರಿಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


Spread the love
Share:

administrator

Leave a Reply

Your email address will not be published. Required fields are marked *