Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಯಲ್ಲಾಪುರ: ಅರಬೈಲ್ ಘಾಟ್‌ನಲ್ಲಿ ಭೀಕರ ರಸ್ತೆ ಅಪಘಾತ; ಲಾರಿಗೆ ತೂಫಾನ್ ವಾಹನ ಡಿಕ್ಕಿ, 6 ಮಂದಿ ಸಾ*ವು!

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರವಾಡ ಮೂಲದ ಆರು ಜನ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮಂಗಳೂರು ಹಾಗೂ ಧರ್ಮಸ್ಥಳ ಪ್ರವಾಸಕ್ಕೆ ಹೊರಟಿದ್ದ ತೂಫಾನ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯೇ ಈ ದುರಂತಕ್ಕೆ ಕಾರಣವಾಗಿದೆ. ಮೃತರೆಲ್ಲರೂ ಹುಬ್ಬಳ್ಳಿ-ಧಾರವಾಡದಲ್ಲಿ ಆನ್‌ಲೈನ್ ಆಹಾರ ಸರಬರಾಜು ಸಂಸ್ಥೆ ‘ಸ್ವಿಗ್ಗಿ’ (Swiggy) ಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಹುಬ್ಬಳ್ಳಿ-ಧಾರವಾಡದ ಈ ಯುವಕರ ತಂಡವು ಧಾರವಾಡದಿಂದ ರಾತ್ರಿ ವೇಳೆ ಧರ್ಮಸ್ಥಳ ಹಾಗೂ ಮಂಗಳೂರು ಕಡೆಗೆ ಪ್ರವಾಸ ಹೊರಟಿತ್ತು. ಚಾಲಕ ಸೇರಿದಂತೆ ಒಟ್ಟು 9 ಜನರಿದ್ದ ತೂಫಾನ್ ವಾಹನವು ಅರಬೈಲ್ ಘಾಟ್‌ನ ಬಳಗಾರ್ ತಲುಪುತ್ತಿದ್ದಂತೆ, ಎದುರಿನಿಂದ ಬಂದ ಲಾರಿ ನಡುವೆ ಭೀಕರವಾಗಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ ತೂಫಾನ್ ವಾಹನವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗೆ ಕುಳಿತಿದ್ದವರು ಹೊರಬರಲಾರದ ಸ್ಥಿತಿ ನಿರ್ಮಾಣವಾಗಿತ್ತು.

ಅಪಘಾತದಲ್ಲಿ ತೂಫಾನ್ ವಾಹನದಲ್ಲಿದ್ದ ಆರು ಜನರು ತೀವ್ರ ರಕ್ತಸ್ರಾವ ಹಾಗೂ ಗಾಯಗಳಿಂದಾಗಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಬಸವರಾಜ್ (48 ವರ್ಷ), ಅಭಿಷೇಕ್ ಈಶ್ವರ್ (28 ವರ್ಷ), ಅಕ್ಷಯ (26 ವರ್ಷ), ಅಭಿಷೇಕ್ (26 ವರ್ಷ), ವಾಹನ ಚಾಲಕ ಸಂಜೀವ ಅಲಿಯಾಸ್ ಸಂಜಯ ಅಂಗಡಿ (33 ವರ್ಷ) ಹಾಗೂ ಮಂಜುನಾಥ ಚುಲಕಿ (32 ವರ್ಷ) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಶಿವರಾಜ್ ದುರ್ಗಪ್ಪ ಮಡಿವಾಳ್ (22 ವರ್ಷ), ಸಚಿನ್ ಮತ್ತು ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ (28 ವರ್ಷ) ಅವರನ್ನು ಸ್ಥಳೀಯರು ಹಾಗೂ ಪೊಲೀಸರ ನೆರವಿನಿಂದ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸದ್ಯ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ


Spread the love
Share:

administrator

Leave a Reply

Your email address will not be published. Required fields are marked *