ಹಿಂದುಗಳೇಎಚ್ಚರ! ಹಿಂದುಗಳೇ ಅಲ್ಪಸಂಖ್ಯಾತರಾಗ್ತಾರೆ- ಹೈಕೋರ್ಟ್ ಕಿಡಿ

ಪ್ರಯಾಗರಾಜ್: ಮತಾಂತರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಲಹಾಬಾದ್ ಹೈಕೋರ್ಟ್, ‘ಹೀಗೇ ಮತಾಂತರ ಮುಂದುವರಿಯುತ್ತಾ ಹೋದರೆ ಬಹುಸಂಖ್ಯಾತರು ಅಲ್ಪ ಸಂಖ್ಯಾತರಾಗುತ್ತಾರೆ’ ಎಂದು ಆತಂಕ ವ್ಯಕ್ತಪಡಿಸಿದೆ.
ಹಲವು ಹಿಂದೂ ಧರ್ಮೀಯ ಗ್ರಾಮಸ್ಥರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಿಸಿದ ಆರೋಪ ಹೊತ್ತಿರುವ ಕೈಲಾಸ್ ಎಂಬುವನ ಜಾಮೀನು ಅರ್ಜಿ ವಜಾಗೊಳಿಸಿರುವ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರ ಪೀಠ, ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
‘ಭಾರತವಾಸಿಗಳ ಧರ್ಮವನ್ನು ಬದಲಿಸುವಂತಹ ಧಾರ್ಮಿಕ ಸಭೆಗಳನ್ನು ಕೂಡಲೇ ನಿಲ್ಲಿಸಬೇಕು. ಇಲ್ಲವಾದಲ್ಲಿ ಇಂದು ಬಹುಸಂಖ್ಯಾತರಾಗಿರುವವರು ಮುಂದೊಂದು ದಿನ ಅಲ್ಪಸಂಖ್ಯಾತರಾಗುತ್ತಾರೆ. ಪ್ರಚಾರ ಎಂದರೆ ಧರ್ಮವನ್ನು ಉತ್ತೇಜಿಸುವುದೇ ಹೊರತು ವ್ಯಕ್ತಿಗಳ ಧರ್ಮಪರಿವರ್ತಿ ಸುವುದಲ್ಲ’ ಎಂದು ಕೋರ್ಟ್ ಬುದ್ದಿಮಾತು ಹೇಳಿದೆ.