Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೇ 1ರಿಂದ ಪೌರ ಕಾರ್ಮಿಕರಿಗೆ ಶಾಶ್ವತ ಸೇವೆ– ಸಿಎಂ ಸಿದ್ದರಾಮಯ್ಯ ಘೋಷಣೆ

Spread the love

ಬೆಂಗಳೂರು :‘ಮೇ1ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡಲಾಗುವುದುʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ‘ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದುʼ ಎಂದರು. ‘ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯʼ ಎಂದರು. ‘ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಮಕ್ಕಳಿಗೆಲ್ಲಾ ಶಿಕ್ಷಣ ಕೊಡಿಸಿ. ಪ್ರತಿಯೊಬ್ಬರೂ ಪ್ರತಿಭಾವಂತರೇ. ಅವಕಾಶ ಸಿಗುವುದಷ್ಟೆ ಮುಖ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ ಪ್ರತಿಭೆ ಹೊರಗೆ ಬರುತ್ತದೆʼ ಎಂದು ಹೇಳಿದರು.

ವಾಹನ ಚಾಲಕರಿಗೂ ಕಾಯಂ ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ‌ಮಾಡಲಾಗುವುದು ಎಂದು ಘೋಷಿಸಿದರು. ನಗದು ರಹಿತ ಆರೋಗ್ಯ ಕಾರ್ಡ್ ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು‌. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು. ಪೌರ ಕಾರ್ಮಿಕರ ಸಮಸ್ಯೆಗಳಲ್ಲಿ ಹಲವನ್ನು ನಮ್ಮ ಸರ್ಕಾರ ಬಗೆಹರಿಸಿದೆ. ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸಿ ಪಾಲಿಕೆಗಳಿಂದಲೇ ಸಂಬಳ ಪಾವತಿಸುವ ವ್ಯವಸ್ಥೆ ಜಾರಿಗೆ ಮಾಡಿದ್ದು ನಮ್ಮ ಸರ್ಕಾರ. ಮೈಸೂರಿನಲ್ಲಿ 524 ಮನೆಗಳನ್ನು ಕೊಡಿಸುವಲ್ಲಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಕಲ್ಪಿಸಿ ಒಂದು ಮನೆಗೆ 6.5 ಲಕ್ಷ ರೂಪಾಯಿ ಹಣ ಕೊಡ್ತಾ ಇರುವುದು ನಮ್ಮ ಸರ್ಕಾರ ಮಾತ್ರ ಎಂದರು. ‘ನೀವೆಲ್ಲಾ ಈಗ ಕಷ್ಟ ಪಟ್ಟು ಶುಚಿತ್ವದ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಮಕ್ಕಳೂ ಇದೇ ಕೆಲಸ ಮಾಡಬಾರದು. ನಿಮ್ಮ ಮಕ್ಕಳು ಇತರೆ ಕೆಲಸಗಳಿಗೆ ಹೋಗಬೇಕು. ಆ ರೀತಿ ನೀವು ಬೆಳೆಯಬೇಕು. ಸಮಾಜದ ಮುಖ್ಯವಾಹಿನಿಗೆ ಬರಬೇಕು. ಪ್ರತೀ ವರ್ಷ ಒಂದು ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು’ ಎಂದು ಕರೆ ನೀಡಿದರು.

ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರ ಕಾರ್ಮಿಕರ ಸಮಾವೇಶದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಕೆ.ಎಚ್.ಮುನಿಯಪ್ಪ, ಸಫಾಯಿ ಕರ್ಮಚಾರಿಗಳ ಮಹಾ ಸಂಘದ ರಾಜ್ಯ ಅಧ್ಯಕ್ಷ ನಾರಾಯಣ ಮತ್ತಿತರರು ಭಾಗವಹಿಸಿದ್ದರು.


Spread the love
Share:

administrator

Leave a Reply

Your email address will not be published. Required fields are marked *