ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ: ಶಿಕ್ಷಕನಗೆ ಬಂಧನ! ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರ ಕ್ರಮ

ಉತ್ತರ ಪ್ರದೇಶ : ಉತ್ತರ ಪ್ರದೇಶದ ಕುಶಿನಗರದಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಕಾಲೇಜೊಂದರಲ್ಲಿ ಮುಸ್ಲಿಂ ಶಿಕ್ಷಕನೊಬ್ಬ ನಡೆಸಿದ ಘೋರ ಕೃತ್ಯ ಬೆಳಕಿಗೆ ಬಂದಿದೆ. ಕಾಲೇಜಿನಲ್ಲಿ ಮುಸ್ಲಿಂ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಯರೊಂದಿಗೆ ದೈಹಿಕ ಸಂಬಂಧ ಹೊಂದಿದ್ದಾನೆ
ಆತನ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇದರ ಬೆನ್ನಲ್ಲೇ ಪೊಲೀಸರು ಆರೋಪಿ ಮುಸ್ಲಿಂ ಶಿಕ್ಷಕ ಮೈನುದ್ದೀನ್ನನ್ನು ಬಂಧಿಸಿದ್ದಾರೆ.
ಏನಿದು ಘಟನೆ?
ಕುಶಿನಗರದ ಅಂತರ ಕಾಲೇಜಿನಲ್ಲಿ ಗುರು ಮತ್ತು ಶಿಷ್ಯರ ಸಂಬಂಧವನ್ನ ಕಳಂಕಗೊಳಿಸುವ ಪ್ರಕರಣ ಬೆಳಕಿಗೆ ಬಂದಿದೆ. ಕಾಲೇಜಿನಲ್ಲಿ ಮುಸ್ಲಿಂ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ. ಕಾಲೇಜು ಕೋಣೆಯಲ್ಲಿ ಶಿಕ್ಷಕ ಈ ಅಸಹ್ಯಕರ ಕೃತ್ಯವನ್ನು ಮಾಡುತ್ತಿದ್ದಾಗ, ಯಾರೋ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ವಿಡಿಯೋ ವೈರಲ್ ಆದ ನಂತರ ವಿಷಯ ಬೆಳಕಿಗೆ ಬಂದು ಶಿಕ್ಷಕನನ್ನು ಬಂಧಿಸಲಾಗಿದೆ.
ಪ್ರಾಂಶುಪಾಲ ಮತ್ತು ಆರೋಪಿ ಶಿಕ್ಷಕ ಅಮಾನತು
ಈ ವಿಷಯದ ಬಗ್ಗೆ ಡಿಐಒಎಸ್ಗೆ ಮಾಹಿತಿ ಸಿಕ್ಕ ತಕ್ಷಣವೇ ಕಠಿಣ ಕ್ರಮ ಕೈಗೊಂಡಿದ್ದು, ಆರೋಪಿ ಶಿಕ್ಷಕ ಮತ್ತು ಪ್ರಾಂಶುಪಾಲರನ್ನು ಅಮಾನತುಗೊಳಿಸಿದ್ದಾರೆ. ಈ ವಿಷಯದ ಬಗ್ಗೆ ಮಾಹಿತಿ ಪಡೆದ ನಂತರ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಕೂಡ ಕಾಲೇಜಿಗೆ ಆಗಮಿಸಿ ಗೇಟ್ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಎಬಿವಿಪಿ ಕಾರ್ಯಕರ್ತರು ಸರ್ವಿಸ್ ರಸ್ತೆಯನ್ನು ತಡೆದು ಪ್ರೊಟೆಸ್ಟ್ ಮಾಡಿದರು.
ಉತ್ತಮ ಅಂಕದ ಆಮೀಷ!
ಶಿಕ್ಷಕ ಮೈನುದ್ದೀನ್ ಅನ್ಸಾರಿ ವಿದ್ಯಾರ್ಥಿನಿಯರಿಗೆ ಉತ್ತಮ ಅಂಕ ನೀಡುವ ಭರವಸೆ ನೀಡಿ ಅವರನ್ನ ತನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದನಂತೆ. ಆತ ಒಬ್ಬೊಬ್ಬರನ್ನೇ ಟಾರ್ಗೆಟ್ ಮಾಡಿ ಕೋಣೆಗೆ ಕರೆಸುತ್ತಿದ್ದ. ವಿದ್ಯಾರ್ಥಿನಿಯರನ್ನ ದೈಹಿಕವಾಗಿ ಶೋಷಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಆದರೆ ಈ ಬಾರಿ ಧೈರ್ಯ ತೋರಿದ ಒಬ್ಬ ವಿದ್ಯಾರ್ಥಿನಿಯ ಕುಟುಂಬಸ್ಥರು ಕಸ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪೊಲೀಸರು ಆತನನ್ನ ಬಂಧಿಸಿದ್ದಾರೆ. ಈ ವಿಷಯದಲ್ಲಿ ಸಿಒ ಕಸ್ಯ ಕುಂದನ್ ಸಿಂಗ್ ಅವರ ಹೇಳಿಕೆಯೂ ಬೆಳಕಿಗೆ ಬಂದಿದೆ. ಈ ಘಟನೆ ಬೆಳಕಿಗೆ ಬಂದ ನಂತರ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರೇ ಈ ರೀತಿ ವರ್ತಿಸಿದರೆ ಮಕ್ಕಳು ಯಾರನ್ನು ನಂಬಬೇಕು? ಇಂತಹ ಹೀನ ಕೃತ್ಯ ಎಸಗಿದ ಕಾಮುಕ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ