Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೇರಳ: ಬಸ್ಸು ಕಂದಕಕ್ಕೆ ಉರುಳಿ 14 ವರ್ಷದ ಬಾಲಕಿ ಸಾವು -15ಕ್ಕೂ ಹೆಚ್ಚು ಮಂದಿಗೆ ಗಾಯ

Spread the love

ಎರ್ನಾಕುಲಂ: ಕೇರಳ ರಾಜ್ಯ ಸಾರಿಗೆಯ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ದಾರುಣ ಘಟನೆ ಎರ್ನಾಕುಲಂನ ನೇರ್ಯಮಂಗಲಂ ಮಣಿಯಾಂಪಾರದಲ್ಲಿ ನಡೆದಿದೆ.  ಇಡುಕ್ಕಿ ಕೀರಿತೋಡ್ ಮೂಲದ ಅನಿಂಟಾ ಬೆನ್ನಿ ಮೃತಪಟ್ಟ ಬಾಲಕಿ ಘಟನೆಯಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಅವರಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಇಂದು ಬೆಳಗ್ಗೆ ಕಟ್ಟಪ್ಪನದಿಂದ ಎರ್ನಾಕುಲಂಗೆ ಬರುತ್ತಿದ್ದ ಕೇರಳ ಸಾರಿಗೆ ಇಲಾಖೆಗೆ ಸೇರಿದ ನಿಗದಿತ ನಿಲುಗಡೆಯ ಬಸ್ ಅಪಘಾತಕ್ಕೀಗಿ. ರಸ್ತೆ ಪಕ್ಕದ ಸುಮಾರು 10 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ.

ಬಸ್ ನಿಯಂತ್ರಣ ತಪ್ಪಿ ಉರುಳಿದಾಗ ಹೊರಗೆ ಎಸೆಯಲ್ಪಟ್ಟ  ಬಾಲಕಿ ಬಸ್ಸಿನಡಿ ಸಿಲುಕಿದ ಪರಿಣಾಮ ಬಾಲಕಿಯ ಜೀವ ಹೋಗಿದೆ. ಕ್ರೇನ್ ಮೂಲಕ ಬಸ್ಸನ್ನು ಮೇಲಕ್ಕೆತ್ತಿ ಕೂಡಲೇ ಬಾಲಕಿ ಅನಿಂಟಾ ಬೆನ್ನಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಜೀವ ಉಳಿಸಿಕೊಳ್ಳಲಾಗಲಿಲ್ಲ, ಬಸ್ಸಿನಲ್ಲಿ ಸಿಲುಕಿದ್ದ ಇತರ ಪ್ರಯಾಣಿಕರನ್ನು ಕೂಡಲೇ ಹೊರತೆಗೆಯಲಾಯಿತು. ಅಗ್ನಿಶಾಮಕ ದಳ ಸೇರಿದಂತೆ ಹಲವು ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದ್ದರು. ಬಸ್ಸಿನಲ್ಲಿ ಹಲವಾರು ಪ್ರಯಾಣಿಕರಿದ್ದರು. ನೇರ್ಯಮಂಗಲಂನಿಂದ ಇಡುಕ್ಕಿಗೆ ಹೋಗುವ ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಬದಿಯ ಕ್ರ್ಯಾಶ್ ಬ್ಯಾರಿಯರ್ ಗೆ ಡಿಕ್ಕಿ ಹೊಡೆದ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ ಎಂದು ತಿಳಿದು ಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *