ಮದುವೆಗೆ ನಿರಾಕರಿಸಿದ ಯುವತಿಗೆ ಚಾಕು ಇರಿದನೇ ಪ್ರಿಯಕರ?

ವಿಜಯನಗರ : ಇತ್ತೀಚೆಗೆ ಪ್ರೀತಿ ಹೆಸರಲ್ಲಿ ಅಪರಾಧ ಪ್ರಕರಣಗಳು ಜಾಸ್ತಿಯಾಗ್ತಿದೆ. ಹೆಣ್ಮಕ್ಕಳಿಗೆ ಅನಗತ್ಯ ತೊಂದರೆ ನೀಡಲಾಗುತ್ತಿದ್ದು, ಯುವತಿ ಮದುವೆಯಾಗಲು ನಿರಾಕರಿಸಿದಕ್ಕೆ ಪ್ರಿಯಕರ ಚಾಕು ಇರಿದಿದ್ದಾನೆ.
ಪಾಗಲ್ ಪ್ರೇಮಿ ತನ್ನ ಪ್ರಿಯತಮೆಗೆ ಚಾಕು ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ನಗರಸಭೆ ಕಾರ್ಯಾಲಯದ ಬಳಿ ನಡೆದಿದೆ.
ಭಾರತಿ ಶಾವಿ(26) ಹಲ್ಲೆಗೊಳಗಾದ ಯುವತಿ. ವಿಜಯಭಾಸ್ಕರ್(26) ಹಲ್ಲೆ ಮಾಡಿದ ಪ್ರೇಮಿ ಎಂದು ಗುರುತಿಸಲಾಗಿದೆ.ಕಳೆದ 5 ವರ್ಷಗಳ ಹಿಂದೆ ಯುವಕನ ಜೊತೆ ಫೇಸ್ಬುಕ್ನಲ್ಲಿ ಪರಿಚಯ ಆಗಿ ಇಬ್ಬರಿಗೂ ಲವ್ ಆಗಿತ್ತು. ಈಗ ಆತನಿಂದ ಅಂತರ ಕಾಯ್ದುಕೊಂಡಿದ್ದಕ್ಕೆ ಅವಘಡ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ.
ಹೊಸಪೇಟೆ ಪಟ್ಟಣ ಠಾಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಯುವತಿಗೆ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.