Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹಲ್ಲು ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣು.

Spread the love

ಚಿಕ್ಕಮಗಳೂರು: ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಘ್ನೇಶ್ (18) ಮೃತ ದುರ್ದೈವಿ. ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದ ವಿಘ್ನೇಶ್​ ಮೊದಲ ವರ್ಷದ ಐಟಿಐ ಓದುತ್ತಿದ್ದರು. ನಾಲ್ಕು ವರ್ಷದ ಹಿಂದೆ ಸಂಭವಿಸಿದ್ದ ಅಪಘಾತದಲ್ಲಿ ವಿಘ್ನೇಶ್ 17 ಹಲ್ಲುಗಳನ್ನ ಕಳೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸದಾ ಆಸ್ಪತ್ರೆಗೆ ಹೋಗಿ ಬರುತ್ತಿದ್ದರು. ಇದೀಗ, ಮನನೊಂದು ವಿಘ್ನೇಶ್​ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಯಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಮಾಚಾರದ ಆತಂಕ, ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆಗೆ ಶರಣುತನ್ನ ಮೇಲೆ ವಾಮಾಚಾರವಾಗಿದೆ ಎಂದು ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಭಕ್ತರಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (29) ಮೃತ ದುರ್ದೈವಿ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದ ಜಯಂತಿ10 ವರ್ಷದ ಹಿಂದೆ ಮಂಜುನಾಥ್​ನ ಎಂಬುವರನ್ನು ಮದುವೆಯಾಗಿದ್ದಾರೆ. ಇಬ್ಬರಿಂದ ನನ್ನ ಮೇಲೆ ವಾಮಾಚಾರ ನಡೆದಿದೆ ಎಂದು ಡೆತ್​​ನೋಟ್​​ ಬರೆದಿಟ್ಟು ಜಯಂತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *