ರೈಲು ನಿಲ್ಲೋದಕ್ಕೂ ಮುನ್ನ ಇಳಿಯುವ ಸಾಹಸದಲ್ಲಿ ಅವಘಡ_ಹಳಿಗೆ ಸಿಲುಕಿ 2 ಕಾಲು ಕಟ್,ಯುವಕ ಸಾವು

ತುಮಕೂರು: ರೈಲು ನಿಲ್ಲೋದಕ್ಕೂ ಮುನ್ನವೇ ಇಳಿಯಲು ಹೋಗಿ, ಹಳಿಗೆ ಕಾಲು ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ತುಮಕೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಮೃತ ಯುವಕನನ್ನು ತುರುವೇಕೆರೆ ಅಮ್ಮಸಂದ್ರ ಮೂಲದ ಛಾಯಾಂಕ್ ಎಂದು ಗುರುತಿಸಲಾಗಿದೆ.ಸೋಮವಾರ ಬೆಳಗ್ಗೆ ಯುವಕ ಪುಷ್ಪುಲ್ ಟ್ರೈನ್ಗೆ ಬಂದಿದ್ದ. ಈ ವೇಳೆ ರೈಲು ನಿಲ್ಲುವ ಮೊದಲು ಇಳಿಯಲು ಹೋಗಿ ಬ್ಯಾಗ್ ರೈಲಿನ ಹ್ಯಾಂಡಲ್ಗೆ ಸಿಲುಕಿ ಈ ಅವಘಡ ಸಂಭವಿಸಿದೆ.

ರೈಲ್ವೆ ನಿಯಮದ ಪ್ರಕಾರ, ಸಾರ್ವಜನಿಕರು ರೈಲು ನಿಲ್ಲುವ ಮೊದಲು ಇಳಿಯಲು ಪ್ರಯತ್ನಿಸುವುದು ಅಪರಾಧವಾಗಿದೆ. ಈ ನಿಯಮವನ್ನು ಉಲ್ಲಂಘಿಸುವುದರಿಂದ ಅನೇಕ ಅಪಘಾತಗಳು ಸಂಭವಿಸುತ್ತಿವೆ. ಹಾಗಾಗಿ ಯಾರೂ ಸಹಾಯಕ್ಕೆ ಬಂದಿರಲಿಲ್ಲ. ಈ ವೇಳೆ ಯುವಕ ತಮ್ಮವರಿಗೆ ಕರೆ ಮಾಡಲು ಫೋನ್ ಹುಡುಕಾಡುತ್ತಿದ್ದ. ಆದರೆ 25 ನಿಮಿಷ ಕಳೆದರೂ ಗಾಯಾಳುವನ್ನು ಆಸ್ಪತ್ರೆ ಸಾಗಿಸದೆ, ಪೊಲೀಸರು ವಿಳಾಸ ಪತ್ತೆ ಮಾಡಲು ಕಾಲಹರಣ ಮಾಡಿದ್ದಾರೆ.
ಕೊನೆಗೆ ಪೊಲೀಸರು ಸ್ಥಳಕ್ಕೆ ಬಾರದೆ ಯುವಕ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.ಈ ಘಟನೆಗಳಿಂದ, ರೈಲ್ವೆ ಅಧಿಕಾರಿಗಳು ಮತ್ತು ಸಾರ್ವಜನಿಕರು ರೈಲು ಸುರಕ್ಷತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರಯಾಣಿಕರು ರೈಲು ನಿಲ್ಲುವ ಮೊದಲು ಇಳಿಯಲು ಪ್ರಯತ್ನಿಸುವುದನ್ನು ತಪ್ಪಿಸಬೇಕು, ಇದರಿಂದ ಅನೇಕ ಅಪಘಾತಗಳನ್ನು ತಪ್ಪಿಸಬಹುದು.