ಅಪಘಾತದಲ್ಲಿ ಅಗ್ನಿವೀರ್ ಯೋಧ ಸಾವು

ಚಾಮರಾಜನಗರ: ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಅಗ್ನಿವೀರ್ ಯೋಧ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ ಕಮರವಾಡಿ ಸಮೀಪ ಗುರುವಾರ ರಾತ್ರಿ ನಡೆದಿದೆ. ಚಾಮರಾಜನಗರದ ಪ್ರಜ್ವಲ್(21) ಮೃತ ಅಗ್ನಿವೀರ್ ಯೋಧ

ಪ್ರಜ್ವಲ್ ಚಾಮರಾಜನಗರದ ಸೇವಾ ಭಾರತಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಮಚಂದ್ರ ಅವರ ಪುತ್ರ.
ಪ್ರಜ್ವಲ್
ಪಶ್ಚಿಮ ಬಂಗಾಳದದಲ್ಲಿ ಅಗ್ನಿ ವೀರ್ ಯೋಧನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ರಜೆ ಮೇಲೆ ಊರಿಗೆ ವಾಪಾಸಾಗಿದ್ದರು.
ರಜೆ ಮೇಲೆ ಊರಿಗೆ ಬಂದಿದ್ದ ಪ್ರಜ್ವಲ್, ಮೈಸೂರಿಗೆ ತೆರಳಿ ಟೀ. ನರಸೀಪುರ ಮಾರ್ಗವಾಗಿ ವಾಪಾಸ್ ಆಗುವಾಗ ಕಮರವಾಡಿ ಬಳಿ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಪ್ರಜ್ವಲ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಪ್ರಜ್ವಲ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿಮ್ಸ್ ಗೆ ರವಾನೆ ಮಾಡಲಾಗಿದೆ. ಅವಘಡದ ಬಳಿಕ ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡಿರುವ ಸಂತೇಮರಹಳ್ಳಿ ಠಾಣೆ ಪೊಲೀಸರು ಕೇಸ್ ದಾಖಲಿಸಿದ್ದಾರೆ.
