ಮಂಗಳೂರಿನ ಕದ್ರಿಯಲ್ಲಿ ಪ್ರಾಚೀನ ಬುದ್ಧ ಶಿಲ್ಪ ಪತ್ತೆ

ಮಂಗಳೂರು :ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯದ ಕೆರೆಯೊಂದರಲ್ಲಿ ಅಪೂರ್ವವಾದ ಬುದ್ಧನ ಶಿಲ್ಪ ಮತ್ತು ಗುಹಾ ಸಮುಚ್ಚಯಗಳು ಇತ್ತೀಚೆಗೆ ನಡೆಸಿದ ಪುರಾತತ್ತ್ವ ಅನ್ವೇಷಣೆಯ ಸಂದರ್ಭದಲ್ಲಿ ಪತ್ತೆಯಾಗಿದೆ ಎಂದು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಪ್ರೊ.ಟಿ. ಭಾವಿಸಬಹುದಾಗಿದೆ.
ಕದ್ರಿಯ ಗುಹೆಗಳು:
ಕದ್ರಿ ಮಂಜುನಾಥ ದೇವಾಲಯದ ಕೆರೆಗಳ ಮೇಲ್ಭಾಗದ ಗುಡ್ಡೆಯಲ್ಲಿ ಮೂರು ಗುಹೆಗಳನ್ನು ಕೆಂಪುಮುರಕಲ್ಲನ್ನು ಕಡಿದು ನಿರ್ಮಿಸಲಾಗಿದೆ. ಬಲಭಾಗದ ಗುಹೆಯ ಪ್ರವೇಶದ್ವಾರವು ಬೃಹತ್ ಶಿಲಾಯುಗದ ಕಲ್ಮನೆ ಸಮಾಧಿಗಳ ಪ್ರವೇಶದ್ವಾರದಂತಿದೆ ಹಾಗೂ ಇಡೀ ರಚನೆ ಕಲ್ಮನೆ ಸಮಾಧಿಯಂತಿದೆ. ಇನ್ನೆರೆಡು ಗುಹೆಗಳು ಎತ್ತರವಾದ ಜಗತಿಯ ಮೇಲೆ ನಿರ್ಮಿಸಲಾಗಿದ್ದು, ಚೌಕಾಕಾರದ ಎರಡು ಪ್ರವೇಶದ್ವಾರಗಳನ್ನು ಒಳಗೊಂಡಿವೆ. ಗುಹೆಗಳ ಹೊರ ಮತ್ತು ಒಳಭಾಗದ ಭಿತ್ತಿಗಳು ನಯವಾಗಿ ನಿರಾಡಂಬರವಾಗಿವೆ. ಗುಹೆಗಳು ಕೇವಲ ಒಂದೊಂದು ಕೋಣೆಯನ್ನು ಒಳಗೊಂಡಿದ್ದು, ದೀಪಗಳನ್ನು ಇರಿಸುವ ಗೂಡುಗಳನ್ನು ಒಳಗೊಂಡಿವೆ. ಆದದ್ದರಿಂದ, ಈ ಗುಹಾ ರಚನೆಗಳನ್ನು ವಾಸ್ತವ್ಯದ ಉದ್ದೇಶಕ್ಕಾಗಿ ರಚಿಸಿದ ಗುಹೆಗಳೆಂದು ತರ್ಕಿಸಬಹುದಾಗಿದೆ. ಗುಹೆಗಳ ವಾಸ್ತು ರಚನೆಯ ವಿನ್ಯಾಸ ಮತ್ತು ಶೈಲಿಗಳನ್ನು ಗಮನಿಸಿದರೆ, ಅವುಗಳನ್ನು ಕ್ರಿ.ಶ. ಸಮಾರು 4-6ನೇ ಶತಮಾನದಲ್ಲಿ ನಿರ್ಮಿಸಿದ ಗುಹೆಗಳೆಂದು ನಿರ್ಧರಿಸಬಹುದಾಗಿದೆ ಎಂದು ಮುರುಗೇಶಿ ತಿಳಿಸಿದ್ದಾರೆ.
ಮಹತ್ವ: ಕದ್ರಿಯ ಈ ಶೋಧಗಳು, ಕದ್ರಿಯ ಪ್ರಾಚೀನತೆಯನ್ನು ಕ್ರಿ.ಶ.4-5ನೇ ಶತಮಾನಕ್ಕೆ ತೆಗೆದುಕೊಂಡು ಹೋಗುತ್ತವೆ. ಕದ್ರಿಯು, ಕ್ರಿಸ್ತ ಶಕಾರಂಬದಲ್ಲಿ ಮಹಾಯಾನ ಬೌದ್ಧ ಕೇಂದ್ರವಾಗಿದ್ದು, ನಂತರ ವಜ್ರಯಾ ಬೌದ್ಧ ಕೇಂದ್ರವಾಗಿ ಕೊನೆಗೆ ದಕ್ಷಿಣ ಭಾರತದ ಪ್ರಮುಖ ನಾಥಪಂಥದ ಕೇಂದ್ರವಾಗಿ ಪರಿವರ್ತನೆ ಹೊಂದಿತೆಂದು ತಿಳಿಯಬಹುದಾಗಿದೆ. ಕದ್ರಿಯಲ್ಲಿ ಪುರಾತತ್ತ್ವ ಅನ್ವೇಷಣೆಗೆ ಅನುಮತಿ ನೀಡಿ ದೇವಾಲಯದ ಆಡಳಿತಾಧಿಕಾರಿ ಅರುಣ್ ಕುಮಾರ್ ಸಹಕರಿಸಿದ್ದು, ಈ ಅನ್ವೇಷಣೆಯಲ್ಲಿ ಮಣಿಪಾಲ್ ವಿಶ್ವವಿದ್ಯಾನಿಲಯದ ಪಿ.ಹೆಚ್ಡಿ ವಿದ್ಯಾರ್ಥಿ, ಶ್ರೇಯಸ್ ಕೊಳಪೆ, ಶಿರ್ವ ಎಂ.ಎಸ್.ಆರ್.ಎಸ್. ಕಾಲೇಜಿನ ಪುರಾತತ್ತ್ವ ವಿಭಾಗದ ಉಪನ್ಯಾಸಕರಾದ ಶ್ರೇಯಸ್ ಬಂಟಕಲ್ಲು, ಕಾಲೇಜಿನ ಪುರಾತತ್ತ್ವ ವಿಭಾಗದ ವಿಧ್ಯಾರ್ಥಿ ರವೀಂದ್ರ ಕುಶ್ವಾ, ಮಂಗಳೂರು ವಿಶ್ವವಿದ್ಯಾ ಕಾಲೇಜಿನ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ಕಾರ್ತಿಕ್ ಭಾಗವಹಿಸಿದ್ದರು ಎಂದು ಮುರುಗೇಶಿ ತಿಳಿಸಿದ್ದಾರೆ.