ಈರುಳ್ಳಿ ದರ ಕುಸಿತಕ್ಕೆ ಕೋಪಗೊಂಡ ರೈತ ರಾಷ್ಟ್ರೀಯ ಹೆದ್ದಾರಿಯಲ್ಲಿ ಈರುಳ್ಳಿ ಸುರಿದು ಪ್ರತಿಭಟನೆ

ವಿಜಯಪುರ: ಈರುಳ್ಳಿ ದರ ದಿಢೀರ್ ಕುಸಿತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ ಸುರಿದು ರೈತ ಹೊರಳಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ.

ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ರೈತ ನಂದಪ್ಪ ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ ಸುರಿದು ಹೊರಳಾಡಿ ಗೋಳಾಡಿದ್ದಾರೆ. ರೈತರಾದ ನಂದಪ್ಪ ಗುಡ್ಡದ, ಮಲ್ಲಿಕಾರ್ಜುನ ಗೋಲಗೊಂಡ ಎಂಬವರಿಗೆ ಈರುಳ್ಳಿ ಸೇರಿದ್ದು, ಕ್ವಿಂಟಾಲ್ಗೆ 250 ರೂ. ದರ ನಿಗದಿಗೆ ಆಕ್ರೋಶ ವ್ಯಕ್ತಪಡಿಸಿ ಈ ರೀತಿ ಮಾಡಿದ್ದಾರೆ.
ಈ ವೇಳೆ ಸರ್ಕಾರ ಹಾಗೂ ದಲ್ಲಾಳಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಘಟನೆ ನಡೆದಿದೆ.