Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹೆಂಡತಿ ಓಡಿಹೋದ ಕೋಪ: ನಾದಿನಿಯನ್ನು ಕೊಂದು, ಮಗಳ ಬೆರಳು ಕತ್ತರಿಸಿದ ವ್ಯಕ್ತಿ

Spread the love

ನವದೆಹಲಿ: ಹೆಂಡತಿ ಯಾರೊಂದಿಗೋ ಓಡಿ ಹೋಗಿದ್ದಕ್ಕೆ ವ್ಯಕ್ತಿಯೊಬ್ಬ ನಾದಿನಿಯನ್ನು ಹತ್ಯೆ(Murder) ಮಾಡಿ, ಆಕೆಯ ಮಗಳ ಬೆರಳು ಕತ್ತರಿಸಿರುವ ಭಯಾನಕ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಖ್ಯಾಲಾದಲ್ಲಿ ಘಟನೆ ನಡೆದಿದೆ. ತನ್ನ ಹೆಂಡತಿ ಇನ್ನೊಬ್ಬ ವ್ಯಕ್ತಿಯೊಂದಿಗೆ ಓಡಿಹೋಗಲು ಅವರು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿರುವ ಆತ ಈ ದುಷ್ಕೃತ್ಯವೆಸಗಿದ್ದಾನೆ. ಮೃತರನ್ನು ಬೌನ್ಸರ್ ಆಗಿ ಕೆಲಸ ಮಾಡುತ್ತಿದ್ದ ನುಸ್ರತ್ (39) ಎಂದು ಗುರುತಿಸಲಾಗಿದ್ದು, ಗಾಯಗೊಂಡ ಅಕ್ಬರಿ (42) ಮತ್ತು ನುಸ್ರತ್ ಅವರ ಪುತ್ರಿ ಸಾನಿಯಾ (20) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರಕರಣದ ದೂರುದಾರ ಉಸ್ಮಾನ್ (19) ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿ ಇಸ್ತೇಕರ್ ಅಹ್ಮದ್ ಅಲಿಯಾಸ್ ಬಬ್ಬು (49) ವೃತ್ತಿಯಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದು, ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಗಾಜಿಯಾಬಾದ್‌ನ ಲೋನಿ ನಿವಾಸಿ ಬಬ್ಬು ಬೆಳಗ್ಗೆ 7 ಗಂಟೆ ಸುಮಾರಿಗೆ ನುಸ್ರತ್ ನಿದ್ರಿಸುತ್ತಿದ್ದಾಗ ಆಕೆಯ ಮನೆಗೆ ಹೋಗಿದ್ದಾನೆ. ಅವನು ಹೊಸದಾಗಿ ಖರೀದಿಸಿದ ಕ್ಲೀವರ್ ಅನ್ನು ಟಿಫಿನ್ ಬಾಕ್ಸ್ ಒಳಗೆ ಬಚ್ಚಿಟ್ಟಿದ್ದ. ನುಸ್ರತ್ ಎಚ್ಚರಗೊಂಡು ಅವನಿಗೆ ಚಹಾ ಕೊಟ್ಟಾಗ, ಆತ ಆಯುಧವನ್ನು ಹೊರತೆಗೆದು ಆಕೆಯ ಎದೆ ಮತ್ತು ಕುತ್ತಿಗೆಯ ಮೇಲೆ ಹಲವು ಬಾರಿ ಹಲ್ಲೆ ಮಾಡಿ ಆಕೆಯನ್ನು ಕೊಂದಿದ್ದಾನೆ.


Spread the love
Share:

administrator

Leave a Reply

Your email address will not be published. Required fields are marked *