Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಾಬಾಬುಡನ್​​ ದರ್ಗಾದಲ್ಲಿ ಮತ್ತೊಂದು ವಿವಾದ: ದತ್ತಪೀಠದ ಔದುಂಬರ ವೃಕ್ಷ ಪೂಜೆಗೆ ನಿರ್ಬಂಧ ಬಜರಂಗದಳ ಆಕ್ರೋಶ

Spread the love

ಚಿಕ್ಕಮಗಳೂರು: ಸದಾ ಒಂದಿಲ್ಲೊಂದು ವಿವಾದದಿಂದಲೇ ಸುದ್ದಿಯಲ್ಲಿರುವ ವಿವಾದಿತ ಕೇಂದ್ರ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಮತ್ತೊಂದು ವಿವಾದ ಮುನ್ನೆಲೆಗೆ ಬಂದಿದೆ. ಗೋರಿಗಳ ನಡುವಿನ ಔದುಂಬರ ವೃಕ್ಷ ಪೂಜೆಗೆ ಅವಕಾಶ ನೀಡುವಂತೆ ಬಜರಂಗದಳಪಟ್ಟು ಹಿಡಿದಿದ್ದು, ಸದ್ಯ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಹೊಸ ಟೆನ್ಶನ್ ಶುರುವಾಗಿದೆ.

ಔದುಂಬರ ವೃಕ್ಷಕ್ಕೆ ಪೂಜೆ ಸಲ್ಲಿಸದಂತೆ ಬೇಲಿ: ಜಿಲ್ಲಾಡಳಿತದ ವಿರುದ್ಧ ಹಿಂದೂ ಕಾರ್ಯಕರ್ತರು ಅಸಮಾಧಾನ

ಚಿಕ್ಕಮಗಳೂರು ತಾಲೂಕಿನ ಗುರು ದತ್ತಾತ್ರೇಯ ಬಾಬಾ ಬುಡನ್‌ ಸ್ವಾಮಿ ದರ್ಗಾದ ವಿವಾದವು ಮತ್ತೆ ಮುನ್ನೆಲೆಗೆ ಬಂದಿದೆ. ದತ್ತ ಪೀಠದಲ್ಲಿರುವ ಔದುಂಬರ ವೃಕ್ಷಕ್ಕೆ ಪೂಜೆ ಸಲ್ಲಿಸದಂತೆ ಮರದ ಸುತ್ತಲೂ ಜಿಲ್ಲಾಡಳಿತ ಬೇಲಿ ಹಾಕಿದೆ ಅಂತ ಹಿಂದೂ ಪರ ಸಂಘಟನೆಗಳು ಆರೋಪ ಮಾಡುತ್ತಿವೆ. ಇಲ್ಲಿ ಪೂಜೆ ಸಲ್ಲಿಸಲು ನ್ಯಾಯಾಲಯ ಅಥವಾ ಧಾರ್ಮಿಕ ದತ್ತಿ ಇಲಾಖೆ ನಿಷೇಧ ಹೇರಿಲ್ಲ ಆದರೂ ನಮಗೆ ಜಿಲ್ಲಾಡಳಿತ ಪೂಜೆಗೆ ಅವಕಾಶ ನೀಡಿಲ್ಲ ಅಂತ ಹಿಂದೂ ಕಾರ್ಯಕರ್ತರು ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದಾರೆ.

ಇದೇ ಸ್ಥಳದಲ್ಲಿ ಮುಸಲ್ಮಾನರಿಗೆ ಮಾತ್ರ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ಆದರೆ ನಮಗೆ ಪೂಜೆ ಸಲ್ಲಿಸಲು ಯಾಕೆ ಅವಕಾಶ ಇಲ್ಲ? ಇದು ಯಾವ ನ್ಯಾಯ ಅಂತ ಪ್ರಶ್ನಿಸುತ್ತಿದ್ದಾರೆ. ಜೊತೆಗೆ ದತ್ತ ಪೀಠದಲ್ಲಿ ಮುಜರಾಯಿ ಇಲಾಖೆ ಹೊರತುಪಡಿಸಿ ಬೇರೆ ಯಾರು ಕಾಣಿಕೆ ಡಬ್ಬ ಇಡುವಂತಿಲ್ಲ ಆದರೂ ಅಲ್ಲಿ ಹಸಿರು ಬಟ್ಟೆ ಹಾಸಿ ಕಾಣಿಕೆ ಡಬ್ಬ ಇಟ್ಟು ಹಣ ಸಂಗ್ರಹಿಸಲಾಗುತ್ತಿದೆ. ಇದರಿಂದ ದತ್ತಪೀಠದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ ಎಂದು ಬಜರಂಗದಳ ಮುಖಂಡ ರಂಗನಾಥ್​ ಹೇಳಿದ್ದಾರೆ.

ಇನ್ನು ದತ್ತಪೀಠದ ವ್ಯಾಪ್ತಿಯಲ್ಲಿರುವ ಮಾಣಿಕ್ಯಧಾರಾ ಬಳಿ ಅನಧಿಕೃತ ಅಂಗಡಿಗಳು ಹೆಚ್ಚಾಗಿವೆ. ಅಲ್ಲಿ ಮಾಂಸಹಾರವನ್ನು ತಯಾರಿಸುತ್ತಿರುವುದರಿಂದ ಮಾಣಿಕ್ಯಧಾರಾದಲ್ಲಿ ಸ್ನಾನ ಮಾಡುವವರ ಧಾರ್ಮಿಕ ನಂಬಿಕೆಗೆ ಧಕ್ಕೆ ತರಲಾಗುತ್ತಿದೆ. ಜೊತೆಗೆ ದತ್ತಪೀಠಕ್ಕೆ ಆಗಮಿಸುವ ಪ್ರವಾಸಿಗರನ್ನು ಅಲ್ಲಿನ ಜೀಪ್ ಚಾಲಕರು ಹೆಚ್ಚಿನ ಜನರನ್ನು ಕೂರಿಸಿಕೊಂಡು ಓವರ್ ಲೋಡ್ ಮಾಡಿ ಪ್ರವಾಸಿಗರಿಂದ ಹೆಚ್ಚಿನ ವಸೂಲಿ ಮಾಡಲಾಗುತ್ತಿದೆ. ಇದಕ್ಕೆಲ್ಲಾ ಜಿಲ್ಲಾಡಳಿತ ಕಡಿವಾಣ ಹಾಕಬೇಕೆಂದು ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ಒತ್ತಾಯಿಸಿದ್ದಾರೆ.

ಒಟ್ಟಾರೆ ದಶಕಗಳಿಂದ ಕರ್ನಾಟಕದ ಅಯೋಧ್ಯೆಯಲ್ಲಿ ನಡೆಯುತ್ತಿರುವ ವಿವಾದ ನ್ಯಾಯಾಲಯದಲ್ಲಿದ್ದು, ಇದಕ್ಕೆ ಬ್ರೇಕ್ ಬೀಳುವ ಲಕ್ಷಣವಂತೂ ಗೋಚರಿಸುತ್ತಿಲ್ಲ. ಇದೀಗ ಹಿಂದೂ ಪರ ಕಾರ್ಯಕರ್ತರು ಔದುಂಬರ ವೃಕ್ಷದ ಪೂಜೆಯ ವಿಚಾರವಾಗಿ ಜಿಲ್ಲಾಡಳಿತದ ಕಡೆಗೆ ಬೊಟ್ಟು ಮಾಡುತ್ತಿದ್ದು, ಇದು ಎಲ್ಲಿಗೆ ಹೋಗಿ ನಿಲ್ಲುತ್ತೆ ಅಂತ ಕಾದು ನೋಡಬೇಕಿದೆ.


Spread the love
Share:

administrator

Leave a Reply

Your email address will not be published. Required fields are marked *