Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅರುಣಾಚಲ ಪ್ರದೇಶದಲ್ಲಿ ಭೀಕರ ದುರಂತ: 1,000 ಅಡಿ ಪ್ರಪಾತಕ್ಕೆ ಟ್ರಕ್ ಉರುಳಿ 18 ಕಾರ್ಮಿಕರ ಸಾವು

Spread the love

ಇಟಾನಗರ: ಟ್ರಕ್‌ವೊಂದು 1,000 ಅಡಿ ಪ್ರಪಾತಕ್ಕೆ ಉರುಳಿ 18 ಕಾರ್ಮಿಕರು ಸಾವನ್ನಪ್ಪಿದ ಘಟನೆ ಅರುಣಾಚಲ ಪ್ರದೇಶದ (Arunachal Pradesh) ಅಂಜಾವ್‌ನಲ್ಲಿ ನಡೆದಿದೆ.

ಅಸ್ಸಾಂನ (Assam) ಟಿನ್ಸುಕಿಯಾ ಜಿಲ್ಲೆಯವರಾದ 18 ಕಾರ್ಮಿಕರು ಸಾವನ್ನಪ್ಪಿದ್ದು, ಅರುಣಾಚಲ ಪ್ರದೇಶದ ಹಯುಲಿಯಾಂಗ್-ಚಾಗ್ಲಗಂ ರಸ್ತೆಯ ಬಳಿ ನಿರ್ಮಾಣ ಹಂತದ ಸೈಟ್ ಕೆಲಸಕ್ಕೆ ಟ್ರಕ್‌ನಲ್ಲಿ ಕರೆದೊಯ್ಯುತ್ತಿದ್ದಾಗ ಈ ಅವಘಡ ಸಂಭವಿಸಿದೆ

ಡಿ.8ರಂದು ರಾತ್ರಿ ಅಪಘಾತ ಸಂಭವಿಸಿದ್ದು, ಎರಡು ದಿನಗಳ ಕಾಲ ಯಾರಿಗೂ ಮಾಹಿತಿ ಲಭ್ಯವಾಗಿರಲಿಲ್ಲ. ಡಿ.10ರಂದು ರಾತ್ರಿ ಅಪಘಾತದಲ್ಲಿ ಬದುಕುಳಿದ ಓರ್ವ ವ್ಯಕ್ತಿ ಜಿಆರ್‌ಇಎಫ್  ಶಿಬಿರ ತಲುಪಿದಾಗ ಅರುಣಾಚಲ ಪ್ರದೇಶ ಪೊಲೀಸರು ಮತ್ತು ಪಿಆರ್‌ಒ ರಕ್ಷಣಾ ಇಲಾಖೆಗೆ ಮಾಹಿತಿ ಲಭ್ಯವಾಗಿದೆ. ಆನಂತರ ಗುರುವಾರ (ಡಿ.11) ಬದುಕುಳಿದ ಓರ್ವ ವ್ಯಕ್ತಿಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಸ್ಪಿಯರ್ ಕಾರ್ಪ್ಸ್, ಭಾರತೀಯ ಸೇನೆ, ಸ್ಥಳೀಯ ಪೊಲೀಸರು, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಜಿಲ್ಲಾ ಅಧಿಕಾರಿಗಳು ಶೋಧ ಕಾರ್ಯಚರಣೆಯಲ್ಲಿ ತೊಡಗಿಕೊಂಡರು. ಸೇನಾ ಶೋಧನಾ ಕಾಲಮ್‌ಗಳು, ಜಿಆರ್‌ಇಎಫ್ ತಂಡಗಳು, ವೈದ್ಯಕೀಯ ಘಟಕಗಳು, ಎನ್‌ಡಿಆರ್‌ಎಫ್ ಸಿಬ್ಬಂದಿ, ಸ್ಥಳೀಯ ಪೊಲೀಸರು ಮತ್ತು ಎಡಿಸಿ ಹಯುಲಿಯಾಂಗ್ ಇಳಿಜಾರು ಪ್ರದೇಶದಲ್ಲಿ ಹಗ್ಗದ ಸಹಾಯದಿಂದ ಘಟನಾ ಸ್ಥಳಕ್ಕೆ ತೆರಳಿದರು.

ಸ್ಥಳ ಹೇಗಿತ್ತೆಂದರೆ ಹೆಲಿಕಾಪ್ಟರ್ ಸಹಾಯದಿಂದಲೂ ಗೋಚರಿಸುತ್ತಿರಲಿಲ್ಲ. ನಾಲ್ಕು ಗಂಟೆಗಳ ತೀವ್ರ ಶೋಧ ಕಾರ್ಯಾಚರಣೆ ಬಳಿಕ ರಸ್ತೆಯಿಂದ ಸುಮಾರು 200 ಮೀ. ಕೆಳಗೆ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಟ್ರಕ್‌ನ ಅವಶೇಷಗಳು ಕಂಡುಬಂದಿದೆ. ಈವರೆಗೂ 18 ಶವಗಳನ್ನು ಪತ್ತೆಹಚ್ಚಲಾಗಿದೆ

ಬುಧೇಶ್ವರ್ ದೀಪ್, ರಾಹುಲ್ ಕುಮಾರ್, ಸಮೀರ್ ದೀಪ್, ಜೂನ್ ಕುಮಾರ್, ಪಂಕಜ್ ಮಂಕಿ, ಅಜಯ್ ಮಂಕಿ, ಬಿಜಯ್ ಕುಮಾರ್, ಅಭಯ್ ಭೂಮಿಜ್, ರೋಹಿತ್ ಮಂಕಿ, ಬೀರೇಂದ್ರ ಕುಮಾರ್, ಅಗರ್ ತಂತಿ, ಧಿರೇನ್ ಚೆಟಿಯಾ, ರಜನಿ ನಾಗ್, ದೀಪ್ ಗೋವಾಲಾ, ರಾಮ್‌ಚಬಕ್ ಸೋನಾರ್, ಸೋನಾತನ್ ನಾಗ್, ಸಂಜಯ್ ಕುಮಾರ್, ಕರಣ್ ಕುಮಾರ್ ಮತ್ತು ಜೋನಾಸ್ ಮುಡಾ ಸೇರಿದಂತೆ ಹಲವು ಕಾರ್ಮಿಕರು ಟ್ರಕ್‌ನಲ್ಲಿದ್ದರು ಎಂದು ಗುರುತಿಸಲಾಗಿದೆ.

ತಿನ್ಸುಕಿಯಾದ ಗೆಲಾಪುಖುರಿ ಟೀ ಎಸ್ಟೇಟ್‌ನ 22 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಕಿರಿದಾದ ಪರ್ವತ ರಸ್ತೆಯಿಂದ ಹೊರಟು, ಚಾಗ್ಲಗಂನಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಕೆಎಂ 40ರ ಬಳಿ ಪ್ರಪಾತಕ್ಕೆ ಉರುಳಿದೆ


Spread the love
Share:

administrator

Leave a Reply

Your email address will not be published. Required fields are marked *