Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕುಡಿಯಲು ಹಣ ಕೊಡದಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಲಾಂಗ್‌ನಿಂದ ಹಲ್ಲೆ; ಇಬ್ಬರು ಆರೋಪಿಗಳ ಬಂಧನ

Spread the love

ಬೆಂಗಳೂರು: ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಸ್ನೇಹಿತನ ಮೇಲೆ ಲಾಂಗ್​ನಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಅರಸು ಕಾಲೋನಿಯ ಮಾರಮ್ಮ ದೇಗುಲ ಬಳಿ ನಡೆದಿದೆ. ಡೆಲಿವರಿ ಬಾಯ್ ಮುನಿಯಪ್ಪ ಎಂಬವರ ಮೇಲೆ ಗೌತಮ್ ಮತ್ತು ಸೂರ್ಯ ಹಲ್ಲೆ ನಡೆಸಿದ್ದಾರೆ. ಅ.21ರಂದು ರಾತ್ರಿ 10 ಗಂಟೆಗೆ ನಡೆದಿರುವ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಆರೋಪಿಗಳನ್ನ ತಿಲಕ್​ನಗರ ಪೊಲೀಸರು ಬಂಧಿಸಿದ್ದಾರೆ.

ಈಸ್ಟ್ ಎಂಡ್ ಬಾರ್​ವೊಂದರಲ್ಲಿ ಮುನಿಯಪ್ಪಮದ್ಯ ಸೇವಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ಆರೋಪಿಗಳು ಎಣ್ಣೆ ಕೊಡಿಸು ಎಂದು ಕೇಳಿದ್ದಾರೆ. ಈ ವೇಳೆ ನನ್ನ ಬಳಿ ಹಣ ಇಲ್ಲ, ನಿನಗೆ ಯಾಕೆ ಎಣ್ಣೆ ಕೊಡಿಸಬೇಕು ಎಂದು ಮುನಿಯಪ್ಪ ಪ್ರಶ್ನಿಸಿದ್ದಾರೆ. ಇದೇ ಕೋಪದಲ್ಲಿದ್ದ ಆರೋಪಿಗಳು, ಕಾಲೋನಿ ಮಾರಮ್ಮ ದೇವಸ್ಥಾನ ಬಳಿ ಕಿರಿಕ್ ಮಾಡಿದ್ದಾರೆ. ನಾನು ಜೈಲಿನಿಂದ ಹೊರ ಬಂದು 15 ದಿನ ಅಷ್ಟೇ ಆಗಿದ್ದು, ನನ್ನನ್ನು ಕಂಡ್ರೆ ಭಯ ಇಲ್ವಾ ಎಂದು ಗೌತಮ್ ಗಲಾಟೆ ಮಾಡಿದ್ದಾನೆ. ಈ ವೇಳೆ ಮಾತಿಗೆ ಮಾತಿಗೆ ಮಾತು ಬೆಳೆದು ಮುನಿಯಪ್ಪ ಮೇಲೆ ಆರೋಪಿಗಳಾದ ಗೌತಮ್ ಮತ್ತು ಸೂರ್ಯ ಲಾಂಗ್​ನಿಂದ ಹಲ್ಲೆ ನಡೆಸಿದ್ದಾರೆ. ಘಟನೆ ಸಂಬಂಧ ತಿಲಕ್​ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಬಾರ್ ಕ್ಯಾಶಿಯರ್ ಕೊಲೆ: ಆರೋಪಿ ಅರೆಸ್ಟ್​

ಮದ್ಯಸೇವನೆ ಬಳಿಕ ಸ್ನ್ಯಾಕ್ಸ್‌ ನೀಡದ್ದಕ್ಕೆ ಬಾರ್ ಕ್ಯಾಶಿಯರ್ ಕೊಲೆ ಕೇಸ್ ಸಂಬಂಧ ಘಟನೆ ನಡೆದು 24 ಗಂಟೆಯಲ್ಲೇ ಆರೋಪಿಯನ್ನು ಪೊಲೀಸರು‌ ಬಂಧಿಸಿದ್ದಾರೆ. ಸುಭಾಷ್ ಅಲಿಯಾಸ್ ಮಿಯಾ ಎಂಬಾತನನ್ನು ಮಾಲೂರು ಠಾಣೆ ಪೊಲೀಸರು ಬಂಧಿಸಿದ್ದು, ಕಳೆದ ರಾತ್ರಿ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದಲ್ಲಿ ಕೊಲೆ ನಡೆದಿತ್ತು. ಮನೆ ಬಳಿ ಹೊಂಚು ಹಾಕಿ ಚಾಕುವಿನಿಂದ ಇರಿದು ಹಾಸನ ಮೂಲದ ಕುಮಾರ್​ ಎಂಬಾತನನ್ನು ಪತ್ನಿ, ಮಕ್ಕಳ ಎದುರೇ ಆರೋಪಿ ಕೊಲೆಗೈದಿದ್ದ.


Spread the love
Share:

administrator

Leave a Reply

Your email address will not be published. Required fields are marked *