Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಎಟಿಎಂ ದರೋಡೆ ಪ್ರಕರಣ: ಎಸ್‌ಬಿಐಯಿಂದ ಲಕ್ಷಾಂತರ ರೂ. ದೋಚಿ ದುಷ್ಕರ್ಮಿಗಳು ಪರಾರಿ

Spread the love

ಕೋಲಾರ: ಇತ್ತೀಚೆಗೆ ಕರ್ನಾಟಕದಲ್ಲಿ ಬ್ಯಾಂಕ್ ಹಾಗೂ ಎಟಿಎಂ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ. ಬೀದರ್, ಕಲಬುರಗಿ, ಮಂಗಳೂರು ಸೇರಿದಂತೆ ಹಲವೆಡೆ ಬ್ಯಾಂಕ್ ಹಾಗೂ ಎಟಿಎಂನಲ್ಲಿ ಕಳ್ಳತನವಾಗಿದ್ದು, ಈ ಪೈಕಿ ಪೊಲೀಸರು, ಕೆಲ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು, ಕೆಲ ಕಳ್ಳರನ್ನು ಹಿಡಿಯಲು ಇದುವರೆಗೂ ಸಾಧ್ಯವಾಗಿಲ್ಲ. ಇದರ ಬೆನ್ನಲ್ಲೇ ಇದೀಗ ಕೋಲಾರದಲ್ಲಿ ಎಟಿಎಂ ದರೋಡೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕೋಲಾರ ನಗರದ ಎಸ್​​ಬಿಐನಲ್ಲಿ ದರೋಡೆಯಾಗಿದೆ. ಕೋಲಾರ  ನಗರದ ಗಲ್ ಪೇಟೆ ಪೋಲೀಸ್ ಠಾಣೆ ಸಮೀಪದ ಸಹಕಾರ ನಗರದಲ್ಲಿರುವ ಎಸ್​​ಬಿಐ ಎಟಿಎಂನಲ್ಲಿ ಕಳ್ಳತನವಾಗಿದ್ದು, ಎಟಿಎಂ ಮಷಿನ್​​ ನಲ್ಲಿದ್ದ ಸುಮಾರು 27 ಲಕ್ಷ ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದಾರೆ. ಕಳ್ಳತನದ ವಿಷಯ ಗೊತ್ತಾಗುತ್ತಿದ್ದಂತೆಯೇ ಸ್ಥಳಕ್ಕೆ ಕೋಲಾರ ಎಸ್ಪಿ ನಿಖಿಲ್ ಸೇರಿದಂತೆ ಬೆರಳಚ್ವು ತಜ್ಞರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *