ಬಾಗಲಕೋಟೆ: ಆಸ್ತಿ ವಿವಾದಕ್ಕೆ ತಾಯಿ-ಮಗನನ್ನು ಕೊಚ್ಚಿ ಹತ್ಯೆ – ಹತ್ಯೆಗೈದ ಆರೋಪಿ ಪರಾರಿ

ಬಾಗಲಕೋಟೆ: ಜಿಲ್ಲೆಯಲ್ಲಿ ಆಸ್ತಿಗಾಗಿ (property dispute) ಇಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ (Double Murder Case) ಮಾಡಲಾಗಿದೆ. ಬಾಗಲಕೋಟೆ (Bagalakote news) ಜಿಲ್ಲೆಯ ಇಳಕಲ್ ತಾಲ್ಲೂಕಿನ ನಂದವಾಡಗಿ ಗ್ರಾಮದಲ್ಲಿ ಆಸ್ತಿ ವಿವಾದಕ್ಕೆ ವ್ಯಕ್ತಿಯೊಬ್ಬ ತಾಯಿ, ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ತಾಯಿ ಸಂಗಮ್ಮ ಗೋನಾಳ (45), ಮಗ ಸೋಮಪ್ಪ (26) ಎಂಬವರನ್ನು ಕೊಡಲಿಯಿಂದ ಕೊಚ್ಚಿ ಸಣ್ಣ ಸೋಮಪ್ಪ ಗೋನಾಳ ಎಂಬಾತ ಹತ್ಯೆ ಮಾಡಿದ್ದಾನೆ. ಸ್ಥಳಕ್ಕೆ ಇಳಕಲ್ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.