Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಭೀಮಾತೀರದಲ್ಲಾಗಿದ್ದ ರಕ್ತದೋಕುಳಿ – ಕುಖ್ಯಾತ ರೌಡಿ ಬಾಗಪ್ಪ ಹಂತಕರು ಅರೆಸ್ಟ್ !

Spread the love

ವಿಜಯಪುರ: ಭೀಮಾತೀರದಲ್ಲಿ (Bheema Teera) ಎರಡು ದಿನಗಳ ಹಿಂದೆ ಮತ್ತೆ ರಕ್ತದ ಓಕುಳಿ ಹರಿದಿದೆ. ಕೆಲ ದಿನಗಳಿಂದ ತಣ್ಣಗಿದ್ದ ಭೀಮೆಯ (Bheema River) ಒಡಲಿಗೆ ಮತ್ತೆ ರುಧಿರದ ಅರ್ಪಣೆ ಆಗಿದೆ. ಭೀಮಾತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ್ ಜೊತೆ ಗುರುತಿಸಿಕೊಂಡಿದ್ದ, ನಟೋರಿಯಸ್ ರೌಡಿ ಬಾಗಪ್ಪ ಹರಿಜನ್‌ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಈ ಬಗ್ಗೆ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ಅವರು, ಭಾಗಪ್ಪ ಹತ್ಯೆ ಪ್ರಕರಣದ ಸಂಬಂಧ 4 ಜನರನ್ನ ಬಂಧಿಲಾಗಿದೆ. ಪ್ರಕಾಶ್ ಮೇಲಿನಕೇರಿ ಅಲಿಯಾಸ್ ಪಿಂಟು, ರಾಹುಲ್ ಭೀಮಾಶಂಕರ್ ತಳಕೇರಿ, ಸುದೀಪ್ ಕಾಂಬಳೆ ಹಾಗೂ ಮಣಿಕಂಠ ಬೆನಕೊಪ್ಪ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಮತ್ತೋರ್ವ ಆರೋಪಿ ಮಣಿಕಂಠ ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದ ನಿವಾಸಿ ಎಂದು ತಿಳಿದುಬಂದಿದೆ ಎಂದರು.

ಕೃತ್ಯಕ್ಕೆ ಬಳಸಿದ ಆಯುಧಗಳು ಹಾಗೂ ಆಟೋ, ಬೈಕ್‌ ವಶಕ್ಕೆ ಮಡೆಯಲಾಗಿದೆ. ಪಿಸ್ತೂಲ್ ಬಳಸಿ ಗುಂಡು ಹಾರಿಸಿ, ಮಚ್ಚು ಹಾಗೂ ಜಂಬೆಯಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಆಸ್ತಿ ವಿಚಾರವಾಗಿ ರವಿ ಹಾಗೂ ಭಾಗಪ್ಪ ನಡುವೆ ಗಲಾಟೆ ನಡೆದಿತ್ತು. ಇದೇ ಕಾರಣಕ್ಕಾಗಿ ಭಾಗಪ್ಪನ ಶಿಷ್ಯರು ರವಿಯನ್ನ ಹತ್ಯೆ ಮಾಡಿದ್ದರು. ರವಿ ಹತ್ಯೆಗೆ ಪ್ರತಿಕಾರವಾಗಿ ಆತನ ತಮ್ಮ ಪ್ರಕಾಶ ಮೇಲಿನಕೇರಿ ಸೇಡು ತಿರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ ಎಂದರು.


Spread the love
Share:

administrator

Leave a Reply

Your email address will not be published. Required fields are marked *