Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅನ್ಯಕೋಮಿನ ಯುವಕನ ಜೊತೆ ಪರಾರಿ ಪ್ರಕರಣ – ಪೊಲೀಸ್ ಠಾಣೆ ಮುಂದೆ ಹಿಂದೂ ಮುಖಂಡರ ಪ್ರತಿಭಟನೆ

Spread the love

ಚಿಕ್ಕಮಗಳೂರು: ಮೂಡಿಗೆರೆಯ ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಾಹಿತ ಮಹಿಳೆಯೊಬ್ಬಳು ಅನ್ಯಕೋಮಿನ ಯುವಕನ ಜೊತೆ ಪರಾರಿಯಾಗಿದ್ದು, ಹಿಂದೂ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ.

2 ವರ್ಷದ ಹಿಂದೆ ಮದುವೆಯಾಗಿದ್ದ 22 ವರ್ಷದ ಮಹಿಳೆ ಅನ್ಯಕೋಮಿನ ಯುವಕನ ಜೊತೆ ಪರಾರಿಯಾಗಿದ್ದಳು. ಈ ಸಂಬಂಧ ಮಹಿಳೆಯ ಪತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಬಣಕಲ್ ಪೊಲೀಸರು ಮಹಿಳೆಯನ್ನು ಪತ್ತೆ ಮಾಡಿ, ಪೊಲೀಸ್ ಠಾಣೆಗೆ ಕರೆತಂದಿದ್ದರು.

ಈ ವಿಚಾರ ಗೊತ್ತಾಗುತ್ತಿದ್ದಂತೆ ಪೊಲೀಸ್ ಠಾಣೆಯ ಮುಂದೆ ಹಿಂದೂ ಮುಖಂಡರು ಜಮಾಯಿಸಿದ್ದರು. ಈ ವೇಳೆ ಹಿಂದೂ ಮುಖಂಡರಿಗೆ ಠಾಣೆಯ ಒಳಗೆ ಬರದಂತೆ ತಡೆಯಲು ಗೇಟ್ ಬಂದ್ ಮಾಡಲಾಗಿದೆ. ಇದರಿಂದ ಹಿಂದೂ ಸಂಘಟನೆಯ ಮುಖಂಡರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಸಂಘಟಕರು- ಗ್ರಾಮಸ್ಥರ ಮನವೊಲಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಠಾಣೆ ಮುಂಭಾಗಕ್ಕೆ ಬಿಡುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟಿದ್ದಾರೆ.

ಈ ಘಟನೆಯಿಂದ ಬಣಕಲ್ ಗ್ರಾಮದಲ್ಲಿ ಬೂದಿಮುಚ್ಚಿದ ಕೆಂಡದಂತಹ ವಾತಾವರಣ ನಿರ್ಮಾಣವಾಗಿದೆ.


Spread the love
Share:

administrator

Leave a Reply

Your email address will not be published. Required fields are marked *