Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಾಜಿ ಐಎಎಸ್ ಅಧಿಕಾರಿ, ಸಂಸದ ಸೆಂಥಿಲ್ ವಿರುದ್ಧ ‘ಆಧಾರ ರಹಿತ ಹೇಳಿಕೆ’: ಆರೋಪಿ ಜನಾರ್ಧನ ರೆಡ್ಡಿ ವಾದ ಆಲಿಸಲು ವಿಶೇಷ ನ್ಯಾಯಾಲಯ ಆದೇಶ

Spread the love

ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ ಹಾಗೂ ತಮಿಳುನಾಡು ಕಾಂಗ್ರೆಸ್‌ ಸಂಸದ ಸಸಿಕಾಂತ್ ಸೆಂಥಿಲ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಸಂಬಂಧ ಆರೋಪಿ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ. ಸಂಸದ ಸಸಿಕಾಂತ್‌ ಸೆಂಥಿಲ್‌ ಅವರು ಸಲ್ಲಿಸಿದ್ದ ಖಾಸಗಿ ದೂರು ಸಂಬಂಧ ಮಂಗಳವಾರ ವಿಚಾರಣೆ ನಡೆಸಿದ 42ನೇ ಎ‌ಸಿಎಂಎಂ ನ್ಯಾಯಾಲಯ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 223ರ ಅಡಿ ದೂರುದಾರ ಸಸಿಕಾಂತ ಸೆಂಥಿಲ್ ಹಾಗೂ ಸಾಕ್ಷಿಯಾದ ಕಿರಣ್‌ಜಿತ್ ಅವರ ಸ್ವಯಂ ಹೇಳಿಕೆಗಳನ್ನು ದಾಖಲಿಸಿಕೊಂಡಿತು.

ಬಳಿಕ ಸೆಕ್ಷನ್ 223 ಅಡಿ ಆರೋಪಿ ಜನಾರ್ಧನ ರೆಡ್ಡಿ ಅವರ ವಾದ ಆಲಿಸಲು ನೋಟಿಸ್ ಜಾರಿಗೊಳಿಸಿದ ನ್ಯಾಯಾಲಯವು ವಿಚಾರಣೆಯನ್ನು ಅ.28ಕ್ಕೆ ಮುಂದೂಡಿತು. ಧರ್ಮಸ್ಥಳ ಪ್ರಕರಣದ ಸಂಬಂಧ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ನನ್ನ ವಿರುದ್ಧ ಆಧಾರ ರಹಿತ, ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡಿ ಮಾನಹಾನಿ ಉಂಟು ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಸಸಿಕಾಂತ್‌ ಸೆಂಥಿಲ್‌ ಅವರು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಅದರಂತೆ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿ ಗಾಲಿ ಜನಾರ್ಧನ ರೆಡ್ಡಿಗೆ ನೋಟಿಸ್‌ ಜಾರಿಗೊಳಿಸಿದೆ.

ಹಿಂದೂ ಸಮಾಜ ಒಡೆಯುವ ಹುನ್ನಾರ
ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಹೆಸರಿನಲ್ಲಿ ಜಾತಿ ಜಾತಿಗಳ ನಡುವೆ ಬೆಂಕಿ ಹಚ್ಚುವ, ಈ ಮೂಲಕ ಹಿಂದೂ ಸಮಾಜವನ್ನು ಒಡೆಯುವ ಕೊಳಕು ರಾಜಕೀಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ಆಪಾದಿಸಿದರು. ಸೋನಿಯಾ ಗಾಂಧಿ ಹಾಗೂ ಕ್ರೈಸ್ತ ಮಿಷನರಿಗಳ ಒತ್ತಡದಿಂದಾಗಿಯೇ ಕ್ರೈಸ್ತ ಎಂಬ ಹೆಸರನ್ನು ಸೇರಿಸಿ ಜನರ ಮತಾಂತರ ಮಾಡುವ ಹೀನ ಕೃತ್ಯಕ್ಕೆ ಸಿದ್ದರಾಮಯ್ಯ ಮುಂದಾಗಿರುವುದು ಅತ್ಯಂತ ನಾಚಿಕೆಗೇಡು ಎಂದರು. ಈ ಸಮೀಕ್ಷೆಯಲ್ಲಿ ಜಾತಿಗಳ ನಡುವೆ ಕದನ ಸೃಷ್ಟಿಸುವ ಹುನ್ನಾರವಿದೆ. ಸರ್ಕಾರ ಕೂಡಲೇ ತನ್ನ ನಿಲುವಿನಿಂದ ಹಿಂದಕ್ಕೆ ಸರಿಯಬೇಕು. ಸರ್ವ ಪಕ್ಷಗಳ ಸಭೆ ಕರೆದು ಚರ್ಚಿಸಿ, ಸಮೀಕ್ಷೆ ಕಾರ್ಯಕ್ಕೆ ಮುಂದಾಗಬೇಕು. ಸರ್ಕಾರ ಪ್ರತಿಪಕ್ಷಗಳ ಸಲಹೆ ನಿರಾಕರಿಸಿದರೆ, ಸಮೀಕ್ಷೆಗೆ ಅಸಹಕಾರ ತೋರಿಸುತ್ತೇವೆ. ಸಮೀಕ್ಷೆ ಬರುವವರಿಗೆ ಯಾವುದೇ ಮಾಹಿತಿ ನೀಡದಂತೆ ಬಹಿಷ್ಕರಿಸುತ್ತೇವೆ ಎಂದು ರೆಡ್ಡಿ ಎಚ್ಚರಿಸಿದರು.


Spread the love
Share:

administrator

Leave a Reply

Your email address will not be published. Required fields are marked *