Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಭ್ರಷ್ಟಾಚಾರದಲ್ಲಿ ಬಿಬಿಎಂಪಿ ಇಂಜಿನಿಯರ್‌ಗಳು ಸೆರೆ: ಲೋಕಾಯುಕ್ತರಿಂದ ಬೃಹತ್ ದಾಳಿ

Spread the love

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯಇಂಜಿನಿಯರ್​ಗಳಿಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಹೆಬ್ಬಾಳ ಉಪ ವಿಭಾಗದ ಎಇಇ ಮಹದೇವ ಮತ್ತು ಆರ್​ಎಂವಿ ಉಪ ವಿಭಾಗದ ಎಇ ಸುರೇಂದ್ರ ಅವರನ್ನು ಲೋಕಾಯುಕ್ತ ಅಧಿಕಾರಿಗಳ ಬಂಧಿಸಿ, ಹಣ ಜಪ್ತಿ ಮಾಡಿದ್ದಾರೆ. ಎನ್ಒಸಿ ನೀಡಲು 10 ಲಕ್ಷ ರೂಪಾಯಿ ಲಂಚ ನೀಡುವಂತೆ ಬಿಬಿಎಂಪಿ ಇಂಜಿನಿಯರ್​ಗಳು ಬೇಡಿಕೆ ಇಟ್ಟಿದ್ದರು. ಸಂಜಯ್ ಎಂಬುವರಿಂದ ಮುಂಗಡವಾಗಿ 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ರೆಡ್​ ಹ್ಯಾಂಡ್​ ಆಗಿ ಹಿಡಿದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಲೋಕಾಯುಕ್ತ ಪೊಲೀಸರಿಂದ ತನಿಖೆ ನಡೆಸುತ್ತಿದ್ದಾರೆ.

BBMP ಕಾರ್ಯಪಾಲಕ ಅಭಿಯಂತರರ ಕೋಟ್ಯಾಂತರ ರೂ ಆಸ್ತಿ ಪತ್ತೆ

ಇದೇ ವರ್ಷ ಮಾರ್ಚ್ ತಿಂಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಿಬಿಎಂಪಿ ಕಾರ್ಯಪಾಲಕ ಅಭಿಯಂತರರು ಹೆಚ್. ಬಿ. ಕಲ್ಲೇಶಪ್ಪಗೆ ಸೇರಿದ ಒಟ್ಟು 6 ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಒಟ್ಟು 6,50,52, 663 ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿ ಪತ್ತೆಯಾಗಿತ್ತು. ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ 4 ಕೋಟಿ 97 ಲಕ್ಷದ 34 ಸಾವಿರ ರೂ. ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ 1 ಕೋಟಿ 53 ಲಕ್ಷದ 18 ಸಾವಿರದ 663 ರೂ. ಆಗಿತ್ತು.


Spread the love
Share:

administrator

Leave a Reply

Your email address will not be published. Required fields are marked *