Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಳ್ತಂಗಡಿ: ಭಾರಿ ಮಳೆ ಹಿನ್ನೆಲೆ ನಾಲ್ಕು ಪ್ರವಾಸಿ ತಾಣ ನಿಷೇಧ

Spread the love

ಬೆಳ್ತಂಗಡಿ: ಕೆಲವು ದಿನಗಳಿಂದ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದವರೆಗೆ ಪ್ರವೇಶವನ್ನು ನಿಷೇಧಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಬೆಳ್ತಂಗಡಿ ವನ್ಯಜೀವಿ ವಿಭಾಗ ಮೇ 31ರಂದು ಆದೇಶ ಹೊರಡಿಸಿದೆ.

ಜಲಪಾತ ಪ್ರದೇಶದ ಸುತ್ತಮುತ್ತ ತೀರಾ ಕಡಿದಾದ ಕಲ್ಲು ಬಂಡೆಗಳಿದ್ದು, ಘಾಟಿ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದು, ಎಲ್ಲಾ ನದಿ ಹಳ್ಳಗಳು ಉಕ್ಕಿ ಹರಿಯುತ್ತಿವೆ. ಒಳ ಹರಿವು ಜಾಸ್ತಿ ಇರುವುದರಿಂದ ಪ್ರವಾಸಿಗರ ಚಾರಣಕ್ಕೆ ಅನಾನುಕೂಲ ಪರಿಸ್ಥಿತಿ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಬೆಳ್ತಂಗಡಿ ವನ್ಯಜೀವಿ ವಲಯದ ಕುದುರೆಮುಖ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿರುವ ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ ಮತ್ತು ಬಂಡಾಜೆ ಜಲಪಾತಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂದರ್ಶನವನ್ನು ನಿಷೇಧಿಸುವುದು ಅವಶ್ಯವಾಗಿರುತ್ತದೆ.ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಈ ಪ್ರದೇಶಗಳಿಗೆ ಭೇಟಿ ನೀಡುವ ಪ್ರವಾಸಿಗರ ಭದ್ರತಾ ಹಿತದೃಷ್ಟಿಯಿಂದ ಪ್ರವಾಸಿಗರ ಸಂದರ್ಶನವನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಬೆಳ್ತಂಗಡಿ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠಾ ಆದೇಶ ಹೊರಡಿಸಿರುತ್ತಾರೆ.


Spread the love
Share:

administrator

Leave a Reply

Your email address will not be published. Required fields are marked *