Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಫಲಿತಾಂಶ; ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಬಿಗ್ ಶಾಕ್!

Spread the love

ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಐದು ಸ್ಥಾನ, ಬಿಜೆಪಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.
ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ.ಹರಿಪ್ರಸಾದ್, ಬಿ.ಎಸ್.ಶಿವಣ್ಣ ತಿಪ್ಪಣ್ಣಪ್ಪ ಕಮಕನೂರ್, ಪಿ.ವಿ.ಮೋಹನ್, ವಿನಯ್ ಕಾರ್ತಿಕ್ ಹಾಗೂ ಬಿಜೆಪಿ ಅಭ್ಯರ್ಥಿಗಳಾದ ಲಿಂಗರಾಜ್ ಪಾಟೀಲ್, ರಘು ಕೌಟಿಲ್ಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಗೋವಿಂದರಾಜು ಸೋಲನ್ನು ಅನುಭವಿಸಿದ್ದಾರೆ.

ಕಣದಲ್ಲಿದ್ದ ಒಟ್ಟು ಎಂಟು ಅಭ್ಯರ್ಥಿಗಳ ಪೈಕಿ ಏಳು ಅಭ್ಯರ್ಥಿಗಳು ಜಯ ಸಾಧಿಸಿದ್ದು, ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಐದೂ ಅಭ್ಯರ್ಥಿಗಳು ಸುಲಭವಾಗಿ ಗೆದ್ದು ಬೀಗಿದ್ದಾರೆ. ಇತ್ತ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಿಂದ ಕಣಕ್ಕಿಳಿದಿದ್ದ ಮೂವರು ಅಭ್ಯರ್ಥಿಗಳಲ್ಲಿ ಇಬ್ಬರು ಮಾತ್ರ ವಿಜಯಶಾಲಿಯಾಗಿದ್ದು, ಕಾಂಗ್ರೆಸ್‌ನ ಐದನೇ ಅಭ್ಯರ್ಥಿಯಾಗಿದ್ದ ವಿನಯ್ ಕಾರ್ತಿಕ್ ಎದುರು ಜೆಡಿಎಸ್‌ ಅಭ್ಯರ್ಥಿ ಗೋವಿಂದರಾಜು ಅವರು ಮತಗಳ ಕೊರತೆಯಿಂದ ಸೋಲನ್ನು ಕಂಡಿದ್ದಾರೆ. ಈ ಸೋಲಿನ ಮೂಲಕ ಜಂಟಿಯಾಗಿ ಅಖಾಡಕ್ಕಿಳಿದಿದ್ದ ಮೈತ್ರಿಕೂಟಕ್ಕೆ ಮುಖಭಂಗವಾಗಿದೆ.

ಗುರುವಾರ ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106ರಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 4ರ ಮತದಾನ ನಡೆತ್ತು. ಚುನಾವಣೆಯಲ್ಲಿ ಅಡ್ಡಮತದಾನ ಆಗುವ ಭೀತಿ ಎದುರಾಗಿರುವುದರಿಂದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲು ರೆಸಾರ್ಟ್ ರಾಜಕೀಯದ ಮೊರೆ ಹೋಗಿತ್ತು.


Spread the love
Share:

administrator

Leave a Reply

Your email address will not be published. Required fields are marked *