Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೀದರ್: ರಸ್ತೆ ಮಧ್ಯೆ ದಿಢೀರ್ ಬೆಂಕಿಗಾಹುತಿಯಾದ KSRTC ಬಸ್ – ಪ್ರಯಾಣಿಕರು ಅಪಾಯದಿಂದ ಪಾರು

Spread the love

ಬೀದರ್ ​: ಕಲ್ಯಾಣ ಕರ್ನಾಟಕ ಸಾರಿಗೆ ಬಸ್​ವೊಂದು ಮಾರ್ಗದ ಮಧ್ಯದಲ್ಲೇ ದಿಢೀರ್​ ಬೆಂಕಿ ಹೊತ್ತಿ ಉರಿದ ಘಟನೆ ಜಿಲ್ಲೆಯ ಕಪ್ಪಿಕೆರೆ ಗ್ರಾಮದ ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ಬೆಳಗ್ಗೆ 11:15 ಗಂಟೆ ಸುಮಾರಿಗೆ ಬೀದರ್​​ನಿಂದ ಔರಾದ್​ ಕಡೆಗೆ ಬಸ್​ ಹೊರಟಿತ್ತು. ಸುಮಾರು 25 ಮಂದಿ ಪ್ರಯಾಣಿಕರು ಇದ್ದರು. ಆದರೆ, ಔರಾದ್ ತಾಲೂಕಿನ ಕಪ್ಪಿಕೆರೆ ಗ್ರಾಮದ ಕ್ರಾಸ್ ಬಳಿ ಬರುತ್ತಿದ್ದಂತೆ ಏಕಾಏಕಿ ಬಸ್​ನ ಎಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ನಿರ್ವಾಹಕರು ಬಸ್ ನಿಲ್ಲಿಸಿ, ಎಲ್ಲಾ ಪ್ರಯಾಣಿಕರನ್ನೂ ವಾಹನದಿಂದ ಕೆಳಗಿಳಿಸಿದ್ದಾರೆ. ಬಳಿಕ ಸಂಪೂರ್ಣ ಬಸ್​ ಬೆಂಕಿಗೆ ಆಹುತಿಯಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂತಪೂರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ. ಬಸ್​​ನಲ್ಲಿ ಇದ್ದವರಿಗೆ ಯಾವುದೇ ತೊಂದರೆ ಆಗಿಲ್ಲ.


Spread the love
Share:

administrator

Leave a Reply

Your email address will not be published. Required fields are marked *