Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೀದರ್ ದರೋಡೆ ಪ್ರಕರಣ: ಆರೋಪಿಗಳ ಸುಳಿವು ಕೊಟ್ಟವರಿಗೆ 5 ಲಕ್ಷ ಬಹುಮಾನ

Spread the love

ರಾಜ್ಯದ ಜನತೆಗೆ ಸರ್ಕಾರದಿಂದ 5 ಲಕ್ಷ ರೂ. ಗೆಲ್ಲುವಂತಹ ಬಂಪರ್ ಆಫರ್ ನೀಡಿದೆ. ರಾಜ್ಯದ ಬೀದರ್‌ನಲ್ಲಿ ಹಾಡಹಗಲೇ ಎಟಿಎಂ ಯಂತ್ರಕ್ಕೆ ತುಂಬಬೇಕಿದ್ದ ಹಣದ ಪೆಟ್ಟಿಗೆಯನ್ನು ಹೊತ್ತೊಯ್ದ ಇಬ್ಬರು ದರೋಡೆಕೋರರ ಸುಳಿವು ಕೊಟ್ಟವರಿಗೆ 5 ಲಕ್ಷ ರೂ. ಹಣವನ್ನು ನೀಡುವುದಾಗಿ ಪೊಲೀಸ್ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ.

ಬೀದರ್ ದರೋಡೆ ಪ್ರಕರಣದ ಆರೋಪಿಗಳ ಸುಳಿವು ಕೊಟ್ಟವರಿಗೆ ರಾಜ್ಯ ಪೊಲೀಸ್ ಇಲಾಖೆಯಿಂದ 5 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಬೀದರ್ ನಗರದಲ್ಲಿ ಕಳೆದ ತಿಂಗಳು ಜ.16ರಂದು ಹಾಡುಹಗಲೆ ನಡು ರಸ್ತೆಯಲ್ಲಿಯೇ ಗುಂಡಿನ ದಾಳಿ ನಡೆಸಿ ಒಬ್ಬರನ್ನು ಕೊಲೆ ಮಾಡಿ 93 ಲಕ್ಷ ರೂ. ನಗದು ಹಣವನ್ನು ದರೋಡೆ ಮಾಡಿಕೊಂಡು ಹೋಗಿದ್ದಾರೆ. ಈ ಕೃತ್ಯ ಎಸಗಿದ ಹಂತಕರು ಬಿಹಾರ ಮೂಲದವರು ಎಂದು ಪೊಲೀಸ್ ಇಲಾಖೆ ಖಚಿತಪಡಿಸಿದೆ. ಬಿಹಾರ ರಾಜ್ಯದ ವೈಶಾಲಿ ಜಿಲ್ಲೆಯ ಅಮನ್ ಕುಮಾರ್ ತಂದೆ ಕಿಶೋರ್ ಸಿಂಗ್ ಹಾಗೂ ಅಲೋಕ್ ಕುಮಾರ್ ಅಲಿಯಾಸ ಅಶುತೋಷ್ ತಂದೆ ಶತ್ರುಘನ್ ಪ್ರಸಾದ್ ಸಿಂಗ್ ಎಂಬುವವರೇ ದರೋಡೆಕೋರರಾಗಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *