Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದಾವಣಗೆರೆ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಮೇಲೆ ಹಲ್ಲೆ ಮಾಡಿದ್ದ ತಂಗಿಯ ಮಗ; ಬಂಧಿತ ಆರೋಪಿ ನವೀನ್‌ನಿಂದ ಕುಟುಂಬಸ್ಥರಿಗೆ ಶಾಕ್!

Spread the love

ದಾವಣಗೆರೆ: ಇತ್ತೀಚೆಗೆ ಚನ್ನಗಿರಿ (Channagiri) ತಾಲೂಕಿನ ಕಾರಿಗನೂರು ಕ್ರಾಸ್ ಬಳಿ ಮಹಿಳೆಯ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ (Jewellery) ದರೋಡೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಹಲ್ಲೆಗೊಳಗಾದ ಮಹಿಳೆಯ ತಂಗಿ ಮಗ ಎಂಬುದು ಗೊತ್ತಾಗಿ ಕುಟುಂಬಸ್ಥರು ಶಾಕ್‌ ಆಗಿದ್ದಾರೆ.

ಬಂಧಿತನನ್ನು ನವೀನ್ ಎಂದು ಗುರುತಿಸಲಾಗಿದೆ. ಅ.3ರಂದು ವೀರಮ್ಮ ಅವರ ಮೇಲೆ ಹಲ್ಲೆ ಮಾಡಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದಾಗ ಆರೋಪಿ ದರೋಡೆ ಮಾಡಿದ್ದ. ಈತ ದುಶ್ಚಟಗಳಿಗೆ ದಾಸನಾಗಿದ್ದ. ಸಾಕಷ್ಟು ಸಾಲ ಮಾಡಿಕೊಂಡಿದ್ದ, ಇದರಿಂದಾಗಿ ಸಾಲಗಾರರ ಕಾಟ ಜಾಸ್ತಿಯಾಗಿತ್ತು. ಅದಕ್ಕಾಗಿ ಹಣ ಹೊಂದಿಸಲು ಈ ರೀತಿ ಸಂಚು ರೂಪಿಸಿದ್ದ. ಬಳಿಕ ತನಗೆ ಏನು ತಿಳಿಯದಂತೆ ಘಟನೆ ನಡೆದ ಸ್ಥಳದಲ್ಲೇ ಇದ್ದ ಎಂದು ತಿಳಿದು ಬಂದಿದೆ. 

ಘಟನೆಯಲ್ಲಿ ವೀರಮ್ಮ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಮಹಿಳೆಯ ಪತಿ ಉಮಾಪತಿ ಈ ಸಂಬಂಧ ಹದಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಅನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ


Spread the love
Share:

administrator

Leave a Reply

Your email address will not be published. Required fields are marked *