Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಭೂ ಕಬಳಿಕೆ ವಿರುದ್ಧ ಬೋಗಾದಿ ಗ್ರಾಮಸ್ಥರ ಗರ್ಜನೆ: ಮೈಸೂರಿನಲ್ಲಿ ಪ್ರಬಲ ಪ್ರತಿಭಟನೆ!

Spread the love

ಮೈಸೂರು: ಶಾಲೆಗಾಗಿ ಮಂಜೂರಾಗಿದ್ದ ಭೂಮಿಯನ್ನು ಅನಧಿಕೃತ ವ್ಯಕ್ತಿಗಳು ಕಾನೂನು ಬಾಹೀರವಾಗಿ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಬೋಗಾದಿ ಗ್ರಾಮಸ್ಥರು ಶಾಂತಿಯುತ ಪ್ರತಿಭಟನೆ ನಡೆಸಿದರು.ಬೋಗಾದಿಯ ಹರಿಗಿರಿ ಸೇವಾ ಪ್ರತಿಷ್ಠಾನದ ಬಳಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಭೂಮಿಯನ್ನು ಸಾರ್ವಜನಿಕ ಉದ್ದೇಶವಲ್ಲದೇ ಬೇರೆ ಉದ್ದೇಶಕ್ಕೆ ಬಳಸದಂತೆ ಒತ್ತಾಯಿಸಿದರು. ಈ ವೇಳೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗ್ಯಾರೇಜ್ ರವಿ ಮಾತನಾಡಿ, ಬೋಗಾದಿ ಗ್ರಾಮದಲ್ಲಿನ ಸರ್ವೇ ನಂಬರ್ 32 ವಿವಾಧಿತ ಭೂಮಿ 1997-98ನೇ ಇಸವಿಯಲ್ಲಿ ಶಾಲೆ ನಿರ್ಮಾಣ ಮಾಡುವ ಉದ್ದೇಶಕ್ಕಾಗಿ ಪ್ರಶ್ನಿತ ಹರಿಗಿರಿ ಸೇವಾ ಪ್ರತಿಷ್ಠಾನಕ್ಕೆ ಸರ್ಕಾರದಿಂದ 25 ಗುಂಟೆ ಜಾಗ ಮಂಜೂರಾಗಿದೆ. ಆದರೆ ಪ್ರಸ್ತುತ ಎಂ.ನಾಗರಾಜು ಎಂಬ ವ್ಯಕ್ತಿ ಉದ್ದೇಶಿತ ಭೂಮಿಯನ್ನು ಕಬಳಿಸಲು ನಕಲಿ ದಾಖಲೆ ಸೃಷ್ಟಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಫೆ.4ರಂದು ತಹಸೀಲ್ದಾರ್ ಮಹೇಶ್, ಎಸಿಪಿ ಗಜೇಂದ್ರ ಪ್ರಸಾದ್ ಮತ್ತು ಸರಸ್ವತಿಪುರಂ ಠಾಣಾ ಇನ್ಸ್ಪೆಕ್ಟರ್ ಪುರುಷೋತ್ತಮ್ ನೇತೃತ್ವದಲ್ಲಿ ಶಾಂತಿ ಸಭೆ ನಡೆದು ಭೂಮಿಯನ್ನು ಯತಾಸ್ಥಿತಿ ಕಾಪಾಡುವಂತೆ ಸೂಚನೆ ನೀಡಿದ್ದರೂ ನಾಗರಾಜು ಎಂಬ ವ್ಯಕ್ತಿ ಏಕಾಏಕಿ ಜೆಸಿಬಿ ಕರೆಸಿ ಜಾಗದಲ್ಲಿದ್ದ ಒಂದು ಪಾಳು ಮನೆಯನ್ನು ತೆರವುಗೊಳಿಸಿ ಸ್ವಚ್ಛತಾ ಕಾರ್ಯ ನಡೆಸಿ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ದೂರಿದರು.


Spread the love
Share:

administrator

Leave a Reply

Your email address will not be published. Required fields are marked *