Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಿಸಿಲಿಗೆ ಬ್ರೇಕ್: ಬೆಂಗಳೂರಲ್ಲಿ ಅಕಾಲಿಕ ಮಳೆ, ಜನರಿಗೆ ತಂಪು ಅನುಭವ

Spread the love

ಬೆಂಗಳೂರು, ಮಾರ್ಚ್​ 22: ಕರ್ನಾಟಕದಲ್ಲಿ (Karnataka) ಬಿಸಿಲ ಬೇಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಿವಿಧೆಡೆ ನೆಲ ಕಾದ ಕುಲುಮೆಯಾಗಿದೆ. ಜಾಸ್ತಿ ಬಿಸಲಿನಿಂದಾಗಿ ಜನರು ಬೆಂಡಗಿದ್ದಾರೆ. ಹೀಗಿರುವಾಗಲೇ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದು ದಿಢೀರ್ ಬಂದ ಮಳೆ (Rain) ತಂಪೆರೆದಿದೆ. ಆ ಮೂಲಕ ವಾತಾವರಣ ಕೂಲ್ ಕೂಲ್ ಆಗಿದೆ. ಬೆಂಗಳೂರಿನ ಸಂಜಯನಗರ, ಭೂಪಸಂದ್ರ, ಹೆಬ್ಬಾಳ ಮತ್ತು ಮೇಖ್ರಿ ಸರ್ಕಲ್ ಸುತ್ತಮುತ್ತ ಸೇರಿದಂತೆ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ ಆಗಿದೆ. ಹೀಗಾಗಿ ವಾಹನ ಸವಾರರು ಹಾಗೂ ಸಾರ್ವಜನಿಕರು ಮಳೆಯಲ್ಲಿ ಸಿಲುಕಿ, ಪರದಾಡಿದರು. ಹವಾಮಾನ ಇಲಾಖೆ ಮಳೆ‌ ಮುನ್ಸೂಚನೆ ನೀಡಿತ್ತು.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಣ ಬಿಸಿಲಿನ ವಾತಾವರಣ ಇದೆ. ಈ ಮಧ್ಯೆ ಹಲವು ಜಿಲ್ಲೆಗಳಲ್ಲಿ ವರ್ಷದ ಮೊದಲ ಮಳೆ ಆಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಗುಡುಗು ಸಹಿತ ಮಳೆ ಆಗಿದೆ. ಸುತ್ತಾಮುತ್ತ ಮಳೆರಾಯ ತಂಪೆರೆದಿದ್ದಾನೆ. ಅರ್ಧಗಂಟೆ ಸುರಿದ‌ ಮಳೆ‌ಗೆ‌ ವಾತಾವರಣ ಫುಲ್​ ಕೂಲ್ ಆಗಿದೆ. ವರ್ಷದ ಮೊದಲ ಮಳೆ‌ ಕಂಡು ಜನರು ಸಂತಸಗೊಂಡರು.
ಯಲಹಂಕ ಸುತ್ತಮುತ್ತಲು ಕೂಡ ಧಾರಾಕಾರ ಮಳೆ ಆಗಿದೆ. ಅಕಾಲಿಕ‌ ಮಳೆಯಿಂದಾಗಿ ಸಾರ್ವಜನಿಕರು ಪರದಾಡಿದರು. ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ರಸ್ತೆ ಬದಿಯಲ್ಲಿ ಮಳೆ‌ ನೀರು ಹರಿಯುತ್ತಿದೆ. ಹೀಗಾಗಿ ಕೆಲ‌ಸ ಮುಗಿಸಿ ಮನೆ ತೆರಳಲು ವಾಹನ ಸವಾರರು ಪರದಾಡಿದರು.


Spread the love
Share:

administrator

Leave a Reply

Your email address will not be published. Required fields are marked *